25.7 C
ಪುತ್ತೂರು, ಬೆಳ್ತಂಗಡಿ
March 7, 2026
Uncategorized

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

ಬೆಳ್ತಂಗಡಿ : ಲಾಯಿಲ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಬಡ ಕುಟುಂಬದ ಮಹಿಳೆ ಶ್ರೀಮತಿ ವಿನೋದ ಚಂದು ರಾಣ್ಯ ರವರ ಮನೆಯು ವಿಪರೀತ ಗಾಳಿ ಮಳೆಯಿಂದ ಮನೆಯ ಮೇಲ್ಛಾವಣಿಯ ಹಂಚುಗಳು ಒಡೆದು ಹೋಗಿದ್ದು ವಿಪರೀತ ಮನೆಯು ಸೋರುತ್ತಿದ್ದು ಇವರಿಗೆ ವಾಸ್ತವ್ಯಕ್ಕೆ ಬಹಳ ಕಷ್ಟಕರವಾಗಿತ್ತು.
ಇದನ್ನು ಗಮನಿಸಿದ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಹರಿಕೃಷ್ಣ ರವರು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದು ಪಂಚಾಯತ್ ವತಿಯಿಂದ ಟಾರ್ಪಲ್ ನ್ನು ಒದಗಿಸಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್ ರವರಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಟಾರ್ಪಲ್ ನ್ನು ಹಾಕಿ ದುರಸ್ಥಿ ಮಾಡಿಕೊಡುವ ಸಹಕಾರವನ್ನು ಮನವಿ ಮಾಡಿಕೊಂಡರು.

ಈ ಬಗ್ಗೆ ಮೇಲ್ವಿಚಾರಕರು ಶೌರ್ಯ ಘಟಕದ ಸಂಯೋಜಕರಾದ ವಸಂತಿ ರವರಿಗೆ ತಿಳಿಸಿದಾಗ ತಕ್ಷಣ ಸಂಯೋಜಕರು ಸ್ವಯಂ ಸೇವಕರನ್ನು ಈ ತುರ್ತು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿದರು. ಕೂಡಲೇ ಘಟಕ ಪ್ರತಿನಿಧಿ ಮಂಜುನಾಥ್, ಒಲ್ವಿನ್ ಡಿಸೋಜ, ಅರ್ವಿನ್ ಮಿರಾಂದ, ವಸಂತ್ ರವರು ಸ್ಥಳಕ್ಕೆ ಧಾವಿಸಿ ಪಂಚಾಯತ್ ಸದಸ್ಯರ ಉಪಸ್ಥಿತಿಯಲ್ಲಿ ಮನೆಯ ದುರಸ್ಥಿ ಕಾರ್ಯಾಚರಣೆ ನಡೆಸಿ ಬಡ ಮಹಿಳೆಗೆ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಟ್ಟರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ವಿಸ್ತರಿಸಿದ ಅನ್ನಪೂರ್ಣ ಮೇಲಂತಸ್ತಿನ ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡ ಭೋಜನಾಲಯದ ಲೋಕಾಪ೯ಣೆ

Suddi Udaya

ಕೆಪಿಸಿಸಿ ಕಾರ್ಮಿಕ ಘಟಕದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾ ಅಧ್ಯಕ್ಷರುಗಳ ತರಬೇತಿ ಶಿಬಿರ

Suddi Udaya

ಲಾಯಿಲ: ಪ್ರಸನ್ನ ಕಾಲೇಜು ಬಳಿ ಕಾರು ಮತ್ತು ಬೈಕ್ ನಡುವೆ ಡಿಕ್ಕಿ

Suddi Udaya

ಹರೀಶ್ ಪೂಂಜ ಗೆಲುವು: ಬಂದಾರು ಗ್ರಾಮದ ಬೈಪಾಡಿ,ಮೈರೋಳ್ತಡ್ಕ, ಪಾಣೆಕಲ್ಲು ವಾರ್ಡ್ ಗಳಲ್ಲಿ ಸಂಭ್ರಮಾಚರಣೆ

Suddi Udaya

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

Suddi Udaya

ಆ.22: ಬೆಳ್ತಂಗಡಿ ಉಪವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
error: Content is protected !!