23.7 C
ಪುತ್ತೂರು, ಬೆಳ್ತಂಗಡಿ
April 24, 2026
Uncategorized

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಬಡ ಕುಟುಂಬದ ಮನೆಯ ದುರಸ್ಥಿ ಕಾರ್ಯ

ಬೆಳ್ತಂಗಡಿ : ಲಾಯಿಲ ಕಾರ್ಯಕ್ಷೇತ್ರದಲ್ಲಿ ವಾಸವಾಗಿರುವ ಬಡ ಕುಟುಂಬದ ಮಹಿಳೆ ಶ್ರೀಮತಿ ವಿನೋದ ಚಂದು ರಾಣ್ಯ ರವರ ಮನೆಯು ವಿಪರೀತ ಗಾಳಿ ಮಳೆಯಿಂದ ಮನೆಯ ಮೇಲ್ಛಾವಣಿಯ ಹಂಚುಗಳು ಒಡೆದು ಹೋಗಿದ್ದು ವಿಪರೀತ ಮನೆಯು ಸೋರುತ್ತಿದ್ದು ಇವರಿಗೆ ವಾಸ್ತವ್ಯಕ್ಕೆ ಬಹಳ ಕಷ್ಟಕರವಾಗಿತ್ತು.
ಇದನ್ನು ಗಮನಿಸಿದ ಲಾಯಿಲ ಗ್ರಾಮ ಪಂಚಾಯತ್ ಸದಸ್ಯ ಹರಿಕೃಷ್ಣ ರವರು ಪಂಚಾಯತ್ ಅಧಿಕಾರಿಗಳ ಗಮನಕ್ಕೆ ತಂದು ಪಂಚಾಯತ್ ವತಿಯಿಂದ ಟಾರ್ಪಲ್ ನ್ನು ಒದಗಿಸಿ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಮೇಲ್ವಿಚಾರಕರಾದ ಸುಶಾಂತ್ ರವರಲ್ಲಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಟಾರ್ಪಲ್ ನ್ನು ಹಾಕಿ ದುರಸ್ಥಿ ಮಾಡಿಕೊಡುವ ಸಹಕಾರವನ್ನು ಮನವಿ ಮಾಡಿಕೊಂಡರು.

ಈ ಬಗ್ಗೆ ಮೇಲ್ವಿಚಾರಕರು ಶೌರ್ಯ ಘಟಕದ ಸಂಯೋಜಕರಾದ ವಸಂತಿ ರವರಿಗೆ ತಿಳಿಸಿದಾಗ ತಕ್ಷಣ ಸಂಯೋಜಕರು ಸ್ವಯಂ ಸೇವಕರನ್ನು ಈ ತುರ್ತು ಕಾರ್ಯಾಚರಣೆಯಲ್ಲಿ ಪಾಲ್ಗೊಳ್ಳಲು ವಿನಂತಿಸಿದರು. ಕೂಡಲೇ ಘಟಕ ಪ್ರತಿನಿಧಿ ಮಂಜುನಾಥ್, ಒಲ್ವಿನ್ ಡಿಸೋಜ, ಅರ್ವಿನ್ ಮಿರಾಂದ, ವಸಂತ್ ರವರು ಸ್ಥಳಕ್ಕೆ ಧಾವಿಸಿ ಪಂಚಾಯತ್ ಸದಸ್ಯರ ಉಪಸ್ಥಿತಿಯಲ್ಲಿ ಮನೆಯ ದುರಸ್ಥಿ ಕಾರ್ಯಾಚರಣೆ ನಡೆಸಿ ಬಡ ಮಹಿಳೆಗೆ ವಾಸ್ತವ್ಯಕ್ಕೆ ಅನುಕೂಲ ಮಾಡಿಕೊಟ್ಟರು.

Related posts

ಬೆಳ್ತಂಗಡಿ ಧರ್ಮ ಪ್ರಾಂತ್ಯದಲ್ಲಿ ಗರಿಗಳ ಹಬ್ಬ

Suddi Udaya

ತಾಲೂಕು ವಿಕಲಚೇತನರ ಪುನರ್ವಸತಿ ಕಾರ್ಯಕರ್ತರ ಪ್ರಗತಿ ಪರಿಶೀಲನಾ ಸಭೆ

Suddi Udaya

ನಾಲ್ಕೂರು ಅಂಗನವಾಡಿಯಲ್ಲಿ ಹುಟ್ಟುಹಬ್ಬ ಆಚರಿಸಿದ ಆಯಾನ್ಶ್ ಸುಧಾಮ

Suddi Udaya

ರೆಖ್ಯಾ ದರೋಡೆ ಪ್ರಕರಣ5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಬೆಂಗಳೂರು ಮಾಗಡಿಯ ನಂಜುಂಡ ಬಂಧನ

Suddi Udaya

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ಸರ್ಕಾರಿ ನೌಕರರಿಗೆ ಆರ್‌ಎಸ್‌ಎಸ್‌ ಗೆ ಸೇರುವ ಅವಕಾಶ, ನಿಷೇಧವನ್ನು ಕೊನೆಗೊಳಿಸಿದ ಮೋದಿ ಸರ್ಕಾರ

Suddi Udaya
error: Content is protected !!