24 C
ಪುತ್ತೂರು, ಬೆಳ್ತಂಗಡಿ
June 8, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ನೆಲ್ಯಾಡಿಯಲ್ಲಿ ನಡೆಯಿತು.

ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ನಡೆದ ವಾರ್ಷಿಕ ನೋವೇನಾ ಮಹೋತ್ಸವದ ಸಂದರ್ಭದಲ್ಲಿ, ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರ ಆಪ್ತ ಸಹಾಯಕ ಹಾಗೂ ನಿಷ್ಠಾವಂತ ವಾಹನ ಚಾಲಕರಾಗಿ 25 ವರ್ಷಗಳ ಸೇವೆ ಸಲ್ಲಿಸಿರುವ ಬೆಳ್ತಂಗಡಿ ಉದಯನಗರ ನಿವಾಸಿ ಬಿಜು ಪಾರಪ್ಪುರಮ್ ಅವರನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.

ಬಿಜು ಅವರ ನಿಷ್ಠೆ, ಸೇವಾ ಮನೋಭಾವನೆ, ಶ್ರದ್ದೆ ಮತ್ತು ಕರ್ಮ ಕುಶಲತೆಯನ್ನು ಧರ್ಮಗುರುಗಳಾದ ವಂದನೀಯ ಫಾದರ್ ಶಾಜಿ ಮಾತ್ಯು ಬಣ್ಣಿಸಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು. ಈ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಮಾರ್ ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನೀಯ ಫಾದರ್ ಲಾರೆನ್ಸ್ ಪೂಣೋಲಿಲ್, ವಂದನೀಯ ಸಿಸ್ಟರ್ ಲಿಸ್ ಮಾತ್ಯು ಎಸ್.ಎಚ್., ಟ್ರಸ್ಟಿಗಳಾದ ಅಲೆಕ್ಸ್, ಫಾದರ್ ಎಬಿನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ನಡೆದ ಈ ಸನ್ಮಾನ ಕಾರ್ಯಕ್ರಮವು ಬಿಜು ಅವರ ಸೇವಾ ಮನೋಭಾವನೆಗೆ ಗೌರವ ಸಲ್ಲಿಸುವುದರೊಂದಿಗೆ, ಬರುವ ದಿನಗಳಲ್ಲಿ ಧರ್ಮ ಪ್ರಾಂತ್ಯದ ಇತರರನ್ನು ಸ್ಫೂರ್ತಿ ನೀಡಲು ಕಾರಣವಾಯಿತು.

Related posts

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಇಂದಬೆಟ್ಟು ಗ್ರಾ.ಪಂ. ನಿಕಟಪೂರ್ವ ಅಧ್ಯಕ್ಷ ಆನಂದ ಅಡಿಲು ರವರ ಮನೆಗೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಸೆ.7-9: ಲಾಯಿಲ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಔಟ್ ಸೈಡ್ ವೀಲ್ ಚೇರ್ ವಿತರಣೆ

Suddi Udaya

ಅಪಘಾತದಿಂದ ಗಾಯಗೊಂಡಿರುವ ಕೆಎಸ್‌ಎಮ್‌ಸಿಎ ಪಿಆರ್‌ಒ ಪಿ.ಸಿ ಸೆಬಾಸ್ಟಿಯನ್ ರವರನ್ನು ಭೇಟಿ ಮಾಡಿದ ಬಿಷಪ್ ಲಾರೆನ್ಸ್ ಮುಕ್ಕುಯಿ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya
error: Content is protected !!