ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ನೆಲ್ಯಾಡಿಯಲ್ಲಿ ನಡೆಯಿತು.

ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ನಡೆದ ವಾರ್ಷಿಕ ನೋವೇನಾ ಮಹೋತ್ಸವದ ಸಂದರ್ಭದಲ್ಲಿ, ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರ ಆಪ್ತ ಸಹಾಯಕ ಹಾಗೂ ನಿಷ್ಠಾವಂತ ವಾಹನ ಚಾಲಕರಾಗಿ 25 ವರ್ಷಗಳ ಸೇವೆ ಸಲ್ಲಿಸಿರುವ ಬೆಳ್ತಂಗಡಿ ಉದಯನಗರ ನಿವಾಸಿ ಬಿಜು ಪಾರಪ್ಪುರಮ್ ಅವರನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.

ಬಿಜು ಅವರ ನಿಷ್ಠೆ, ಸೇವಾ ಮನೋಭಾವನೆ, ಶ್ರದ್ದೆ ಮತ್ತು ಕರ್ಮ ಕುಶಲತೆಯನ್ನು ಧರ್ಮಗುರುಗಳಾದ ವಂದನೀಯ ಫಾದರ್ ಶಾಜಿ ಮಾತ್ಯು ಬಣ್ಣಿಸಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು. ಈ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಮಾರ್ ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನೀಯ ಫಾದರ್ ಲಾರೆನ್ಸ್ ಪೂಣೋಲಿಲ್, ವಂದನೀಯ ಸಿಸ್ಟರ್ ಲಿಸ್ ಮಾತ್ಯು ಎಸ್.ಎಚ್., ಟ್ರಸ್ಟಿಗಳಾದ ಅಲೆಕ್ಸ್, ಫಾದರ್ ಎಬಿನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ನಡೆದ ಈ ಸನ್ಮಾನ ಕಾರ್ಯಕ್ರಮವು ಬಿಜು ಅವರ ಸೇವಾ ಮನೋಭಾವನೆಗೆ ಗೌರವ ಸಲ್ಲಿಸುವುದರೊಂದಿಗೆ, ಬರುವ ದಿನಗಳಲ್ಲಿ ಧರ್ಮ ಪ್ರಾಂತ್ಯದ ಇತರರನ್ನು ಸ್ಫೂರ್ತಿ ನೀಡಲು ಕಾರಣವಾಯಿತು.

Related posts

ಮನ್ ಶರ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಗೆ ನೂತನ ಪ್ರಾಂಶುಪಾಲರಾಗಿ ಝೀನತ್ ಬಾನು ಅಧಿಕಾರ ಸ್ವೀಕಾರ

Suddi Udaya

ಉಜಿರೆ: ವಿಜಯ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಎಮ್. ಗೋಪಾಲಕೃಷ್ಣ ಶೆಟ್ಟಿ (ಎಂ.ಜಿ ಶೆಟ್ಟಿ ) ನಿಧನ

Suddi Udaya

ಈ ಬಾರಿಯ ಲೋಕಸಭಾ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧಾರ ಮಾಡುವ ನಿರ್ಣಾಯಕವಾದಂತಹ ಚುನಾವಣೆ: ಪ್ರತಾಪ್ ಸಿಂಹ ನಾಯಕ್

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಅಧ್ಯಕ್ಷರಾಗಿ ಪ್ರಕಾಶ್ ಪ್ರಭು, ಕಾರ್ಯದರ್ಶಿಯಾಗಿ ಡಾ.ಎಂ.ಎಂ ದಯಾಕರ್ ಆಯ್ಕೆ

Suddi Udaya

ನಾರಾವಿ ಶ್ರೀ ಕೃಷ್ಣ ಹೋಟೆಲ್ ನ ಮಾಲಕ ಚಂದ್ರಕಾಂತ ಹೆಗ್ಡೆ ನಿಧನ

Suddi Udaya

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya
error: Content is protected !!