July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೆಲ್ಯಾಡಿ ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ಬೆಳ್ತಂಗಡಿ ಧರ್ಮಾಧ್ಯಕ್ಷರ ಆಪ್ತ ಸಹಾಯಕನಿಗೆ ಸನ್ಮಾನ

ಬೆಳ್ತಂಗಡಿ : ಬೆಳ್ತಂಗಡಿ ಧರ್ಮ ಪ್ರಾಂತ್ಯವು ರಜತ ಸಂಭ್ರಮದ ಮೆರುಗನ್ನು ಅನುಭವಿಸುತ್ತಿರುವ ಈ ಸಂದರ್ಭದಲ್ಲಿ, ಅಪರೂಪದ ಒಂದು ಕಾರ್ಯಕ್ರಮ ನೆಲ್ಯಾಡಿಯಲ್ಲಿ ನಡೆಯಿತು.

ಸಂತ ಅಲ್ಫೋನ್ಸ ಚರ್ಚ್‌ನಲ್ಲಿ ನಡೆದ ವಾರ್ಷಿಕ ನೋವೇನಾ ಮಹೋತ್ಸವದ ಸಂದರ್ಭದಲ್ಲಿ, ಬೆಳ್ತಂಗಡಿ ಧರ್ಮಾಧ್ಯಕ್ಷರಾದ ಪರಮ ಪೂಜ್ಯ ಅತಿವಂದನೀಯ ಲಾರೆನ್ಸ್ ಮುಕ್ಕುಯಿ ಅವರ ಆಪ್ತ ಸಹಾಯಕ ಹಾಗೂ ನಿಷ್ಠಾವಂತ ವಾಹನ ಚಾಲಕರಾಗಿ 25 ವರ್ಷಗಳ ಸೇವೆ ಸಲ್ಲಿಸಿರುವ ಬೆಳ್ತಂಗಡಿ ಉದಯನಗರ ನಿವಾಸಿ ಬಿಜು ಪಾರಪ್ಪುರಮ್ ಅವರನ್ನು ಚರ್ಚ್ ವತಿಯಿಂದ ಸನ್ಮಾನಿಸಲಾಯಿತು.

ಬಿಜು ಅವರ ನಿಷ್ಠೆ, ಸೇವಾ ಮನೋಭಾವನೆ, ಶ್ರದ್ದೆ ಮತ್ತು ಕರ್ಮ ಕುಶಲತೆಯನ್ನು ಧರ್ಮಗುರುಗಳಾದ ವಂದನೀಯ ಫಾದರ್ ಶಾಜಿ ಮಾತ್ಯು ಬಣ್ಣಿಸಿ, ಅವರ ಸೇವೆಯನ್ನು ಪ್ರಶಂಸೆ ಮಾಡಿದರು. ಈ ಸಂದರ್ಭದಲ್ಲಿ ಧರ್ಮಾಧ್ಯಕ್ಷರಾದ ಅತಿವಂದನೀಯ ಮಾರ್ ಲಾರೆನ್ಸ್ ಮುಕ್ಕುಯಿ, ಬೆಳ್ತಂಗಡಿ ಧರ್ಮ ಪ್ರಾಂತ್ಯದ ಚಾನ್ಸಲರ್ ವಂದನೀಯ ಫಾದರ್ ಲಾರೆನ್ಸ್ ಪೂಣೋಲಿಲ್, ವಂದನೀಯ ಸಿಸ್ಟರ್ ಲಿಸ್ ಮಾತ್ಯು ಎಸ್.ಎಚ್., ಟ್ರಸ್ಟಿಗಳಾದ ಅಲೆಕ್ಸ್, ಫಾದರ್ ಎಬಿನ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.

ಸಂತ ಅಲ್ಫೋನ್ಸ ಚರ್ಚ್ ವತಿಯಿಂದ ನಡೆದ ಈ ಸನ್ಮಾನ ಕಾರ್ಯಕ್ರಮವು ಬಿಜು ಅವರ ಸೇವಾ ಮನೋಭಾವನೆಗೆ ಗೌರವ ಸಲ್ಲಿಸುವುದರೊಂದಿಗೆ, ಬರುವ ದಿನಗಳಲ್ಲಿ ಧರ್ಮ ಪ್ರಾಂತ್ಯದ ಇತರರನ್ನು ಸ್ಫೂರ್ತಿ ನೀಡಲು ಕಾರಣವಾಯಿತು.

Related posts

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಶಾರದ ಮಂಟಪ ಉಜಿರೆ 17ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ, ಪೂರ್ವಭಾವಿ ಸಭೆ

Suddi Udaya

ಬೆಳ್ತಂಗಡಿ: ಕೇಂದ್ರ ಸರಕಾರದ ವಿದ್ಯುತ್ ಖಾಸಗೀಕರಣ ವಿರೋಧಿಸಿ ಮೆಸ್ಕಾಂ ಕಚೇರಿ ಎದುರು ಪ್ರತಿಭಟನೆ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ಶ್ರೀ ಶಾಸ್ತರ ಗುಡಿಯ ನೂತನ ಗರ್ಭಗುಡಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 3 ಲಕ್ಷ ಅನುದಾನ

Suddi Udaya

ಶ್ರೀ ನಾಳ ದುರ್ಗಾಪರಮೇಶ್ವರಿ ದೇವಸ್ಥಾನದ ಹಾಲಿ ವ್ಯವಸ್ಥಪನಾ ಸಮಿತಿ ರದ್ದು ಹಿನ್ನಲೆ; ಹೊಸ ಹಣಕಾಸಿನ ವ್ಯವಹಾರ ನಡೆಸದಂತೆ ನ್ಯಾಯಾಲಯ ಆದೇಶ

Suddi Udaya

ದಾರುನ್ನೂರ್ ಮಸೀದಿ ನಿರ್ಮಿಸಿದ ಶೈಖ್ ಅಬ್ದುಲ್ ರವರ ಪುತ್ರ ಖಾಲಿದ್ ಅಲ್ ಝುಬೈರ್ ರಿಗೆ ಸನ್ಮಾನ

Suddi Udaya

ಜ. 20 : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಸಭಾಂಗಣದಲ್ಲಿ ಯುವ ನಿಧಿ ನೋಂದಣಿ ಶಿಬಿರ

Suddi Udaya
error: Content is protected !!