July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ ವಲಯ ಅರಣ್ಯಾಧಿಕಾರಿ ಉಜಿರೆಯ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆ

ಬೆಳ್ತಂಗಡಿ: ಅರಣ್ಯ ಇಲಾಖೆಯ ಬೆಳ್ತಂಗಡಿ ವಲಯದ ಉಜಿರೆಯಲ್ಲಿ ವಿಶೇಷ ಕರ್ತವ್ಯ ನಿರ್ವಹಿಸುತ್ತಿರುವ ಉಪ ವಲಯ ಅರಣ್ಯಾಧಿಕಾರಿ ಕಮಲಾ ಮುಖ್ಯಮಂತ್ರಿಗಳ ಪದಕಕ್ಕೆ ಆಯ್ಕೆಯಾಗಿದ್ದಾರೆ.

ಅರಣ್ಯ ಸಂರಕ್ಷಣೆ, ಅಕ್ರಮ ಕಡಿತಲೆ, ವನ್ಯಜೀವಿ ಸಂರಕ್ಷಣೆ, ಒತ್ತುವರಿ ತೆರವು, ಕ್ರೀಡಾಕೂಟಗಳಲ್ಲಿ ಸಾಧನೆ ಇತ್ಯಾದಿ ಕೆಲಸ ಕಾರ್ಯಗಳು ಹಾಗೂ ಶೌರ್ಯ, ದಿಟ್ಟತನ ತೋರಿಸಿರುವ ಮೂಲಕ ಅರಣ್ಯ ಇಲಾಖೆಯಲ್ಲಿ ಗಣನೀಯ ಸಾಧನೆ ಮಾಡಿರುವ ಅಧಿಕಾರಿಗಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಡಿಆರ್‌ಎಫ್‌ಓ ಕಮಲಾ 2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಜು. 31ರಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಉಜಿರೆಯ ಪೆರ್ಲ ನಿವಾಸಿ ಕಮಲಾ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಪದವಿ ವಿದ್ಯಾಭ್ಯಾಸ ಮಾಡಿದ್ದು, 2005ರಲ್ಲಿ ಅರಣ್ಯ ವೀಕ್ಷಕಿಯಾಗಿ ನೇರ ನೇಮಕಾತಿ ಹೊಂದಿದ್ದರು. ಬೆಳ್ತಂಗಡಿ ವಲಯದ ಚಿಬಿದ್ರೆ, ತೋಟತ್ತಾಡಿಯಲ್ಲಿ ಕಾರ್ಯ ನಿರ್ವಹಿಸಿದ ನಂತರ 2010ರಲ್ಲಿ ಅರಣ್ಯ ರಕ್ಷಕಿಯಾಗಿ ಪದೋನ್ನತಿ ಪಡೆದು ಚಿಬಿದ್ರೆ, ತೋಟತ್ತಾಡಿ, ನೆರಿಯ, ಪುದುವೆಟ್ಟಿನಲ್ಲಿ ಕಾರ್ಯ ನಿರ್ವಹಿಸಿದ್ದರು. 2021ರಲ್ಲಿ ಉಪ ವಲಯ ಅರಣ್ಯಾಧಿಕಾರಿಯಾಗಿ ಬಡ್ತಿ ಪಡೆದು, ಉಪ್ಪಿನಂಗಡಿ ವಲಯದ ಶಿಬಾಜೆಯಲ್ಲಿ ಸೇವೆ ಸಲ್ಲಿಸಿದ್ದರು. 2024ರಲ್ಲಿ ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ವರ್ಗಾವಣೆಗೊಂಡಿದ್ದು, ಪ್ರಸಕ್ತ ಉಜಿರೆಯಲ್ಲಿ ವಿಶೇಷ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Related posts

ಜನಸ್ಪಂದನ ಸಭೆಯ ಫಲಶ್ರುತಿ 108 ಹಕ್ಕು ಪತ್ರ, 54 ಮಂದಿಗೆ ನಡಾವಳಿ ವಿತರಣೆ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಪ್ರಶಾಂತ್ ಪ್ರತಿನಿಧಿಸಿದ ತಂಡ ರಾಷ್ಟ್ರಮಟ್ಟದಲ್ಲಿ ಪ್ರಥಮ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಮೈಸೂರು ಪ್ರಾಂತ್ಯದ ಜಂಟಿ ನಿಬಂಧಕ ಪ್ರಸಾದ್ ರೆಡ್ಡಿ ಭೇಟಿ

Suddi Udaya

ಬೆಳಾಲು ಪೆರಿಯಡ್ಕ ಶಾಲಾ ವಿದ್ಯಾರ್ಥಿಗಳಿಗೆ ಉಜಿರೆ ಪ್ರಭಾತ್ ಸಂಸ್ಥೆ ವತಿಯಿಂದ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ, ಇದರ ನೂತನ ಅಧ್ಯಕ್ಷರಾಗಿ ಮಿತ್ತಬಾಗಿಲು ಕಕ್ಕೆನೇಜಿ ಶಿವಾನಂದ ರಾವ್ ಆಯ್ಕೆ

Suddi Udaya
error: Content is protected !!