25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಜ.24: ನಾಲ್ಕೂರುನಲ್ಲಿ ಶ್ರೀ ಕಟೀಲು ಕ್ಷೇತ್ರ ಮಹಾತ್ಮೆ ಯಕ್ಷಗಾನ ಸೇವಾ ಬಯಲಾಟ

Suddi Udaya

ಲಯನ್ಸ್ ಕ್ಲಬ್ ಬೆಳ್ತಂಗಡಿ ವತಿಯಿಂದ ಲಯನ್ ಎಂ. ಜಿ. ಶೆಟ್ಟಿಯವರಿಗೆ ನುಡಿನಮನ

Suddi Udaya

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮುಂಡೂರುಪಳಿಕೆ ಹಾಲು ಉತ್ಪಾದಕರ ಘಟಕ ಉದ್ಘಾಟನೆ

Suddi Udaya

ಮುಂಡಾಜೆ: ಚಿತ್ಪಾವನ ಸಂಘಟನೆಯ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸುಶ್ಮಾ ಶಶಾಂಕ ಭಿಡೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್ ಡಿ ಎಮ್ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!