July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಆರಾಧನಾ ಸಮಿತಿಗೆ ಸದಸ್ಯರ ನೇಮಕ

Suddi Udaya

ಗೇರುಕಟ್ಟೆ : ಪರಪ್ಪು ಜಮಾಅತಿನ ಎರಡು ಬಡ ಕುಟುಂಬಗಳ ಹೆಣ್ಣು ಮಕ್ಕಳ ಮದುವೆಗೆ ಆಡಳಿತ ಸಮಿತಿ, ಕೆ.ಸಿ.ಎಫ್,ಕೆ.ಎಮ್.ಜೆ., ಎಸ್.ವೈ.ಎಸ್, ಎಸ್.ಎಸ್.ಎಫ್ ಹಾಗೂ ಜಮಾಅತರಿಂದ ಸಹಾಯಧನ ಹಸ್ತಾಂತರ

Suddi Udaya

ಬೆಳಾಲು ಯಕ್ಷ ಮಾಣಿಕ್ಯ ಕಲಾ ಸಂಘ ಉದ್ಘಾಟನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ವತಿಯಿಂದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯ ಭೇಟಿ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲರಾಗಿ ಡಾ.ಕುಮಾರ್ ಹೆಗ್ಡೆ

Suddi Udaya
error: Content is protected !!