25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಉಜಿರೆ ಶ್ರೀ ವನದುರ್ಗಾ ಶ್ರೀ ನಾಗರಕ್ತೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ದುರ್ಗಾಪೂಜೆ, ಆಶ್ಲೇಷ ಬಲಿ, ರಂಗಪೂಜೆ

Suddi Udaya

ನಾರಾವಿ ವಲಯ ಮಟ್ಟದ ಕ್ರೀಡಾಕೂಟ: ಪಡಂಗಡಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ತಂಡ ರಿಲೇಯಲ್ಲಿ ಪ್ರಥಮ ಸ್ಥಾನ

Suddi Udaya

ಉಜಿರೆ : ಕಾರು ಹಾಗೂ ಸ್ಕೂಟರ್ ನಡುವೆ ಅಪಘಾತ: ಸ್ಕೂಟರ್ ನಲ್ಲಿದ್ದ ಮಹಿಳೆಗೆ ಗಂಭೀರ ಗಾಯ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಬಂಗ್ಲೆಗುಡ್ಡೆಯಲ್ಲಿ ಸಿಕ್ಕ ಏಳು ಅಸ್ಥಿಪಂಜರ ಎಫ್ಎಸ್ಎಲ್ ಗೆ ರವಾನೆ

Suddi Udaya

ಬೆಳ್ತಂಗಡಿ ಪಾರಸ್ ಪೃಥ್ವಿ ಜುವೆಲ್ಸ್ ನಲ್ಲಿ ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ” ಪೃಥ್ವಿ ಮಹಾಪರ್ವ”

Suddi Udaya
error: Content is protected !!