25.7 C
ಪುತ್ತೂರು, ಬೆಳ್ತಂಗಡಿ
March 7, 2026
ತಾಲೂಕು ಸುದ್ದಿಪ್ರಮುಖ ಸುದ್ದಿಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ ೧೦ ಗಂಟೆಗೆ ಹೋದಂತಹ ಕರೆಂಟ್ ಬರುವುದು ಬೆಳಗ್ಗೆ. ಸಂಜೆ ಏನಾದರೂ ಫ್ಯೂಸ್ ಹೋಗಿದೆ ಎಂದು ದೂರು ನೀಡಿದರೆ ಅದನ್ನು ಪವರ್‌ಮ್ಯಾನ್‌ಗಳು ಮರುದಿನ ಬಂದು ಹಾಕುತ್ತಾರೆ.
ತೆಕ್ಕಾರು ಗ್ರಾಮದಲ್ಲಿ ಇಬ್ಬರು ಖಾಯಂ ಪವರ್‌ಮ್ಯಾನ್‌ಗಳು ಇದ್ದಾರೆ. ಎಲ್ಲಿಯಾದರು ವಿದ್ಯುತ್ ಕಂಬ, ತಂತಿ ಬಿದ್ದಿದೆ ಎಂದು ದೂರು ನೀಡಿದರೆ ಇವತ್ತು ಜನ ಇಲ್ಲ ನಾಳೆ ಬರುತ್ತೇವೆ ಎಂದು ಹೇಳಿ ಹೋಗುತ್ತಾರೆ. ಜನರಿಗೆ ಇದ್ದರಿಂದ ಸಮಸ್ಯೆ ಆಗುತ್ತಿದೆ.

ಪಂಚಾಯತ್‌ನಲ್ಲೂ ಸರಿಯಾಗಿ ಕರೆಂಟ್ ಇರುವುದಿಲ್ಲ. ಗ್ರಾಮಸ್ಥರು ಏನಾದರು ಕೆಲಸಕ್ಕಾಗಿ ಬಂದರೆ, ಎಲ್ಲಾ ಕೆಲಸಗಳು ಕಂಪ್ಯೂಟರ್‌ನಲ್ಲಿ ಆಗುವುದರಿಂದ ಸರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ, ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಕೆಲಸ ಮಾಡುವುದಿಲ್ಲ ಎಂದು ಹಿಡಿ ಶಾಪ ಹಾಕಿ ಹೋಗುತ್ತಾರೆ. ಮೇ ತಿಂಗಳಿನಲ್ಲಿಯೇ ಮರದ ಗೆಲ್ಲುಗಳನ್ನು ತೆಗೆಯುವಂತಹ ಕೆಲಸವನ್ನು ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ಪದ್ಮಾವತಿ ದೇವಿ ಪ್ರತಿಷ್ಠೆ

Suddi Udaya

ನಿಟ್ಟಡೆ ಕುಂಭಶ್ರೀ ಶಾಲಾ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ಅಂತರ್ ಕಾಲೇಜು ಮತ್ತು ರಾಜ್ಯ ಮಟ್ಟದ ತ್ರೋಬಾಲ್ ಪಂದ್ಯಾಟಕ್ಕೆ ಚಾಲನೆ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಸೆ.6-7-8 : ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಬೆಳ್ತಂಗಡಿ ತಾಲೂಕು, ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ ಆಶ್ರಯದಲ್ಲಿ 27ನೇ ವರ್ಷದ ಸಾಮೂಹಿಕ ಗೌರಿ ಪೂಜೆ ಮತ್ತು ಶ್ರೀ ಗಣೇಶೋತ್ಸವ

Suddi Udaya
error: Content is protected !!