22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಪ್ರಮುಖ ಸುದ್ದಿಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ ೧೦ ಗಂಟೆಗೆ ಹೋದಂತಹ ಕರೆಂಟ್ ಬರುವುದು ಬೆಳಗ್ಗೆ. ಸಂಜೆ ಏನಾದರೂ ಫ್ಯೂಸ್ ಹೋಗಿದೆ ಎಂದು ದೂರು ನೀಡಿದರೆ ಅದನ್ನು ಪವರ್‌ಮ್ಯಾನ್‌ಗಳು ಮರುದಿನ ಬಂದು ಹಾಕುತ್ತಾರೆ.
ತೆಕ್ಕಾರು ಗ್ರಾಮದಲ್ಲಿ ಇಬ್ಬರು ಖಾಯಂ ಪವರ್‌ಮ್ಯಾನ್‌ಗಳು ಇದ್ದಾರೆ. ಎಲ್ಲಿಯಾದರು ವಿದ್ಯುತ್ ಕಂಬ, ತಂತಿ ಬಿದ್ದಿದೆ ಎಂದು ದೂರು ನೀಡಿದರೆ ಇವತ್ತು ಜನ ಇಲ್ಲ ನಾಳೆ ಬರುತ್ತೇವೆ ಎಂದು ಹೇಳಿ ಹೋಗುತ್ತಾರೆ. ಜನರಿಗೆ ಇದ್ದರಿಂದ ಸಮಸ್ಯೆ ಆಗುತ್ತಿದೆ.

ಪಂಚಾಯತ್‌ನಲ್ಲೂ ಸರಿಯಾಗಿ ಕರೆಂಟ್ ಇರುವುದಿಲ್ಲ. ಗ್ರಾಮಸ್ಥರು ಏನಾದರು ಕೆಲಸಕ್ಕಾಗಿ ಬಂದರೆ, ಎಲ್ಲಾ ಕೆಲಸಗಳು ಕಂಪ್ಯೂಟರ್‌ನಲ್ಲಿ ಆಗುವುದರಿಂದ ಸರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ, ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಕೆಲಸ ಮಾಡುವುದಿಲ್ಲ ಎಂದು ಹಿಡಿ ಶಾಪ ಹಾಕಿ ಹೋಗುತ್ತಾರೆ. ಮೇ ತಿಂಗಳಿನಲ್ಲಿಯೇ ಮರದ ಗೆಲ್ಲುಗಳನ್ನು ತೆಗೆಯುವಂತಹ ಕೆಲಸವನ್ನು ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಪಿಯುಸಿ ಫಲಿತಾಂಶ: ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನ ಅಲ್ಶಾನಾ ಗೆ 535 ಅಂಕ

Suddi Udaya

ಬಿಜೆಪಿ ತೆಕ್ಕೆಗೆ ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಬಿರುಸಿನ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತಿ -9, ಕಾಂಗ್ರೇಸ್ -3 ಗೆಲುವು

Suddi Udaya

ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯಲ್ಲಿ ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ

Suddi Udaya

ಅರಣ್ಯ ಹಕ್ಕು ಕಾಯ್ದೆಯ ಸೆಕ್ಷನ್ 3 (2) ಅಡಿಯಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಶಾಸಕ ಹರೀಶ್ ಪೂಂಜರಿಂದ ಪ.ವರ್ಗಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಕನಗವಲ್ಲಿ ರವರಿಗೆ ಮನವಿ

Suddi Udaya

ಗುರುವಾಯನಕೆರೆ ರತ್ನಗಿರಿ ಅಮರ್ ಜಾಲ್ ರಸ್ತೆ ಚರಂಡಿ ಬದಿಯಲ್ಲಿ ಅಪಾಯಕಾರಿ ವಿದ್ಯುತ್ ಕಂಬ

Suddi Udaya

ಮಾ.1: ಉಜಿರೆಯಲ್ಲಿ ಅನು ಇಲೆಕ್ಟ್ರಾನಿಕ್ಸ್ & ಫರ್ನಿಚರ್ಸ್ ಶುಭಾರಂಭ

Suddi Udaya
error: Content is protected !!