30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ ೧೦ ಗಂಟೆಗೆ ಹೋದಂತಹ ಕರೆಂಟ್ ಬರುವುದು ಬೆಳಗ್ಗೆ. ಸಂಜೆ ಏನಾದರೂ ಫ್ಯೂಸ್ ಹೋಗಿದೆ ಎಂದು ದೂರು ನೀಡಿದರೆ ಅದನ್ನು ಪವರ್‌ಮ್ಯಾನ್‌ಗಳು ಮರುದಿನ ಬಂದು ಹಾಕುತ್ತಾರೆ.
ತೆಕ್ಕಾರು ಗ್ರಾಮದಲ್ಲಿ ಇಬ್ಬರು ಖಾಯಂ ಪವರ್‌ಮ್ಯಾನ್‌ಗಳು ಇದ್ದಾರೆ. ಎಲ್ಲಿಯಾದರು ವಿದ್ಯುತ್ ಕಂಬ, ತಂತಿ ಬಿದ್ದಿದೆ ಎಂದು ದೂರು ನೀಡಿದರೆ ಇವತ್ತು ಜನ ಇಲ್ಲ ನಾಳೆ ಬರುತ್ತೇವೆ ಎಂದು ಹೇಳಿ ಹೋಗುತ್ತಾರೆ. ಜನರಿಗೆ ಇದ್ದರಿಂದ ಸಮಸ್ಯೆ ಆಗುತ್ತಿದೆ.

ಪಂಚಾಯತ್‌ನಲ್ಲೂ ಸರಿಯಾಗಿ ಕರೆಂಟ್ ಇರುವುದಿಲ್ಲ. ಗ್ರಾಮಸ್ಥರು ಏನಾದರು ಕೆಲಸಕ್ಕಾಗಿ ಬಂದರೆ, ಎಲ್ಲಾ ಕೆಲಸಗಳು ಕಂಪ್ಯೂಟರ್‌ನಲ್ಲಿ ಆಗುವುದರಿಂದ ಸರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ, ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಕೆಲಸ ಮಾಡುವುದಿಲ್ಲ ಎಂದು ಹಿಡಿ ಶಾಪ ಹಾಕಿ ಹೋಗುತ್ತಾರೆ. ಮೇ ತಿಂಗಳಿನಲ್ಲಿಯೇ ಮರದ ಗೆಲ್ಲುಗಳನ್ನು ತೆಗೆಯುವಂತಹ ಕೆಲಸವನ್ನು ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮಹಿಳಾ ಸಬಲೀಕರಣದ ಕುರಿತು ಉಪನ್ಯಾಸ

Suddi Udaya

ಜಿಲ್ಲಾ ಮಟ್ಟದ ಐ.ಟಿ.ಐ. ವಿದ್ಯಾರ್ಥಿನಿಯರ ತ್ರೋಬಾಲ್ ಪಂದ್ಯಾಟ: ಉಜಿರೆ ಎಸ್.ಡಿ.ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಆದಿಚುಂಚನಗಿರಿ ಶಾಖಾ ಮಠದ ಶ್ರೀ ಧರ್ಮಪಾಲನಾಥ ಸ್ವಾಮೀಜಿರವರನ್ನುಭೇಟಿ ಮಾಡಿದ ಕಿರಣ್ ಚಂದ್ರ ಪುಷ್ಪಗಿರಿ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ದ.ಕ ಜಿಲ್ಲಾ ಮಟ್ಟದ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸ್ವಚ್ಚತಾ ಆಂದೋಲನ

Suddi Udaya

ಕಕ್ಕಿಂಜೆ ಶಾಲೆಯಲ್ಲಿ ಮಕ್ಕಳ ಮೇಲೆ ಹೆಜ್ಜೇನು ದಾಳಿ: ಆಸ್ಪತ್ರೆಗೆ ದಾಖಲು

Suddi Udaya

ಗೇರುಕಟ್ಟೆ: ವಿದ್ಯುತ್‌ ತಂತಿ ಮೇಲೆ ಅಪಾಯಕಾರಿ ಮರ

Suddi Udaya
error: Content is protected !!