September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ವಿತರಣೆಯನ್ನು ಮಾಡಲಾಯಿತು.


ಈ ಸಂಬಂಧವಾಗಿ ಜರಗಿದ ಸಭೆಯಲ್ಲಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ, ಕಾರ್ಯದರ್ಶಿಗಳಾದ ಮಹಮ್ಮದ್ ಶರೀಫ್ ರವರು ಪಾಸನ್ನು ವಿತರಿಸಿ ಶುಭಹಾರೈಸಿದರು. ಉಜಿರೆ, ಓಡಲ, ಮಾಚಾರು, ನಾರ್ಯ, ಕಾಡಂಡ, ದೊಂಪದಪಲ್ಕೆ, ಮಾಯ ಈ ಭಾಗದಿಂದ ಬಸ್ಸಿನಲ್ಲಿ ಬರುವ 23 ಮಂದಿ ವಿದ್ಯಾರ್ಥಿಗಳು ಉಚಿತ ಪಾಸನ್ನು ಸ್ವೀಕರಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಸ್ವಾಗತಿಸಿ ವಂದಿಸಿದರು. ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಕಾರ್ಯಕ್ರಮ ಸಂಯೋಜಿಸಿದರು.

Related posts

ಜಾಗ ಮಾರಾಟದ ಅಗ್ರಿಮೆಂಟ್ ಮಾಡಿ ರೂ.45ಲಕ್ಷ ವಂಚನೆ; ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ‌ ದಾಖಲು

Suddi Udaya

ಜಿಲ್ಲಾಧಿಕಾರಿ ಸಭೆಯಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಮಲೆಕುಡಿಯ ಸಮುದಾಯದ ಮುಖಂಡರ ಒತ್ತಾಯ

Suddi Udaya

ಪ್ರೊ. ನಾವುಜಿರೆ ನಿಧನಕ್ಕೆ ಬೆಳ್ತಂಗಡಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಿ. ಯದುಪತಿ ಗೌಡರಿಂದ ಸಂತಾಪ

Suddi Udaya

ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಬೆಳಾಲು: ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ

Suddi Udaya
error: Content is protected !!