25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ವಿತರಣೆಯನ್ನು ಮಾಡಲಾಯಿತು.


ಈ ಸಂಬಂಧವಾಗಿ ಜರಗಿದ ಸಭೆಯಲ್ಲಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ, ಕಾರ್ಯದರ್ಶಿಗಳಾದ ಮಹಮ್ಮದ್ ಶರೀಫ್ ರವರು ಪಾಸನ್ನು ವಿತರಿಸಿ ಶುಭಹಾರೈಸಿದರು. ಉಜಿರೆ, ಓಡಲ, ಮಾಚಾರು, ನಾರ್ಯ, ಕಾಡಂಡ, ದೊಂಪದಪಲ್ಕೆ, ಮಾಯ ಈ ಭಾಗದಿಂದ ಬಸ್ಸಿನಲ್ಲಿ ಬರುವ 23 ಮಂದಿ ವಿದ್ಯಾರ್ಥಿಗಳು ಉಚಿತ ಪಾಸನ್ನು ಸ್ವೀಕರಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಸ್ವಾಗತಿಸಿ ವಂದಿಸಿದರು. ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಕಾರ್ಯಕ್ರಮ ಸಂಯೋಜಿಸಿದರು.

Related posts

ನಿಡ್ಲೆ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್ ನಿಧನ

Suddi Udaya

ಬೆಳ್ತಂಗಡಿ ನಿತೀಶ್ ಕುಲಾಲ್‌ಗೆ ರಾಜ್ಯಮಟ್ಟದ ಉತ್ತಮ ಸಾಧನಾ ಪ್ರಶಸ್ತಿ ಪ್ರದಾನ

Suddi Udaya

ಕುವೆಟ್ಟು ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ

Suddi Udaya

ಶಿಶಿಲ: ಒಟ್ಲ ನಿವಾಸಿ ನಾರಾಯಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಎ.12: ಬೆಳ್ತಂಗಡಿಯಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Suddi Udaya

ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ ಕಾರುಣ್ಯ ಸ್ಪರ್ಶ ಯೋಜನೆಯಡಿಯಲ್ಲಿ ಸಹಾಯಧನ ಹಸ್ತಾಂತರ

Suddi Udaya
error: Content is protected !!