July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

ಬೆಳ್ತಂಗಡಿ: ದೇಶದಲ್ಲಿ ಸುವ್ಯವಸ್ಥಿತ ಆಡಳಿತ ನಡೆಯಬೇಕಾದರೆ ಪ್ರತಿಯೊಬ್ಬರು ಸಂವಿಧಾನಿಕ ಕಾನೂನುಗಳನ್ನು ಪಾಲಿಸಲೇಬೇಕು ಎಂದು ಬೆಳ್ತಂಗಡಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ.ಕೆ ಹೇಳಿದರು. ಅವರು ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ ಮತ್ತು ವಕೀಲರ ಸಂಘ ಬೆಳ್ತಂಗಡಿ ಹಾಗೂ ವಾಣಿ ಪದವಿ ಪೂರ್ವ ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ಆಶ್ರಯದಲ್ಲಿ ಜರುಗಿದ ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಪೋಕ್ಸೊ ಕಾಯಿದೆಯ ಕುರಿತು ಮಾತನಾಡುತ್ತಾ, ವಿದ್ಯಾರ್ಥಿಗಳು ಕಾನೂನುಗಳ ಅರಿವನ್ನು ಹೊಂದಿರಬೇಕು. ಸಾರ್ವಜನಿಕವಾಗಿ ವ್ಯವಹರಿಸುವಾಗ ಜಾಗೃತವಾಗಿರಬೇಕು. ಲೈಂಗಿಕ ಅಪರಾಧಗಳಿಗೆ ಬಲಿಯಾಗದೆ ಸುಸ್ಥಿರ ಸಮಾಜದ ವಾರಿಸುದಾರರಾಗಬೇಕು ಎಂದರು.


ಸಂಪನ್ಮೂಲ ವ್ಯಕ್ತಿಗಳಾದ ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ಬಿ.ಕೆ. ಪೋಕ್ಸೊ ಕಾಯಿದೆ ಹಾಗೂ ಬಾಲ್ಯ ವಿವಾಹದ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡುತ್ತಾ ಹದಿಹರೆಯದ ವಿದ್ಯಾರ್ಥಿಗಳು ಲೈಂಗಿಕ ತೊಂದರೆಗೆ ಒಳಗಾದಾಗ ಅವರ ಸಂರಕ್ಷಣೆ ಮತ್ತು ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೋಕ್ಸೊ ಕಾಯಿದೆ ಕರ್ತವ್ಯ ನಿರ್ವಹಿಸುತ್ತದೆ. ಬಾಲ್ಯ ವಿವಾಹದಂತಹ ಸಮಸ್ಯೆಗಳಿಂದ ಮುಕ್ತರಾಗಿ ಸಂವಿಧಾನ ನೀಡಲ್ಪಟ್ಟ ಹಕ್ಕುಗಳ ಬಗ್ಗೆ ತಿಳಿದುಕೊಂಡು ವ್ಯವಹರಿಸಬೇಕು. ಇದರೊಂದಿಗೆ ಕರ್ತವ್ಯಕ್ಕೆ ಬದ್ಧರಾಗಿರಬೇಕು ಎಂದರು.


ವಾಣಿ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಗಣೇಶ್ ಗೌಡ ಅಧ್ಯಕ್ಷತೆ ವಹಿಸಿದ್ದರು. ಬೆಳ್ತಂಗಡಿ ತಾಲೂಕು ವಕೀಲರ ಸಂಘದ ಅಧ್ಯಕ್ಷರಾದ ವಸಂತ ಮರಕಡ, ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ. ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ಸ್ವಾಗತಿಸಿದರು. ಕಾಲೇಜಿನ ಕಾನೂನು ಸಾಕ್ಷರತಾ ಸಂಘದ ಸಂಯೋಜಕರಾದ ಶ್ರೀಮತಿ ಮೀನಾಕ್ಷಿ ವಂದಿಸಿದರು. ಕು|ರಾಜೇಶ್ವರಿ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಕನ್ನಡ ಸೇನೆ -ಕರ್ನಾಟಕ ಬೆಳ್ತಂಗಡಿ ಸಮಿತಿ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಪತ್ತನಾಜೆ ಗೆಜ್ಜೆ ಸೇವೆ ಸಮಾಪ್ತಿ

Suddi Udaya

ಕಾಯರ್ತಡ್ಕ ಸ.ಕಿ.ಪ್ರಾ. ಶಾಲಾ ಅಭಿವೃದ್ಧಿಯ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೆ.ಬಿ ಆಯ್ಕೆ

Suddi Udaya

ಇಂದು ಶ್ರೀ ಕ್ಷೇ.ಧ.ಗ್ರಾ.ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಪಾರೆಂಕಿ ಬಿಸಿಎಂ ಹಾಸ್ಟೆಲ್ ಗೆ ಟಿ.ವಿ. ಕೊಡುಗೆ

Suddi Udaya
error: Content is protected !!