25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು.

ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕಾಗದ ತಯಾರಿಕೆಯಿಂದ ಬರೆಯಲು ಬೇಕಾದ ವಿವಿಧ ಪುಸ್ತಕ, ಪೇಪರ್ ಶೀಟ್ ಗಳ ತಯಾರಿಯನ್ನು ವಿವಿಧ ಹಂತಗಳಲ್ಲಿ ಘಟಕದ ಆಯೋಜಕರು ವಿವರವಾದ ಮಾಹಿತಿಯನ್ನು ನೀಡಿದರು.

ಉಜಿರೆಯಲ್ಲಿರುವ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಘಟಕಕ್ಕೆ ಭೇಟಿ ನೀಡಿದಾಗ ವಸ್ತ್ರ ವಿನ್ಯಾಸದ ವಿವಿಧ ಮಜಲುಗಳನ್ನು ವಿವರಿಸಿ, ಒಂದು ಸಂಸ್ಥೆಯ ಆರಂಭದ ಉದ್ದೇಶ,ಲಾಭ ನಷ್ಟಗಳ ಪರಿಗಣನೆ, ಆರ್ಥಿಕ ಉತ್ತೇಜನ, ಉತ್ಪಾದಕರಿಗೆ ಯಾವ ರೀತಿಯಲ್ಲಿ ಪ್ರೋತ್ಸಾಹಿಸುವುದು, ವ್ಯವಹಾರದ ಸೂಕ್ಷ್ಮ ಅನುಭವಗಳನ್ನು ವಿದ್ಯಾರ್ಥಿಗಳು ಸಂಸ್ಥೆಯ ನಿರ್ದೇಶಕರಾದ ಶ್ರೀ ಯತೀಶ್ ಶೆಟ್ಟಿ ಇವರಿಂದ ಮಾಹಿತಿಯನ್ನು ಪಡೆದುಕೊಂಡರು .ಒಂದು ದಿನದ ಪ್ರಾಯೋಗಿಕ ಅಭ್ಯಾಸವನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಚಾಲಕರ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿಯವರ ಪ್ರೋತ್ಸಾಹದಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಯಶಸ್ವಿಯಾಗಿ ನಡೆಸಿದರು. “ಕೋಶ ಓದು ದೇಶ ಸುತ್ತು” ಎಂಬಂತೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿಶೇಷವಾದ ಅನುಭವವನ್ನು ಪಡೆದರು. ಈ ಕಾರ್ಯಕ್ರಮವು ಯಶಸ್ವಿಯಾಗಲು ಎಲ್ಲಾ ಅಧಿಕಾರಿಗಳ ಸಹಭಾಗಿತ್ವ, ಮಾರ್ಗದರ್ಶನ ಕಾರಣವಾಗಿದೆ.

Related posts

ಕನ್ಯಾಡಿಯಲ್ಲಿ ‘ಸ್ಪೂರ್ತಿ’ ಹೊಸ ಜ್ಞಾನ ವಿಕಾಸ ಕೇಂದ್ರ ಉದ್ಘಾಟನೆ

Suddi Udaya

ವಿಧಾನ ಪರಿಷತ್ ಸದಸ್ಯ ಕೆ. ಹರೀಶ್ ಕುಮಾರ್‌ ರವರನ್ನು ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ ಮಂಡಳಿಗೆ ನೇಮಕ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಪೊಲೀಸರ ನಿಯೋಜನೆ: ಪ್ರವಾಸಿಗರ ಮೋಜು ಮಸ್ತಿಗೆ ತಡೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ತಿಂಗಳ ಕಾರ್ಯಕಾರಿ ಸಭೆ: ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು : ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ಬಳಂಜ: ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಕ್ರಿಕೆಟ್ ಪಂದ್ಯಾವಳಿ: ಬಿಡ್ಡಿಂಗ್ ಮಾದರಿಯ 8 ತಂಡಗಳ ನಿಶಾಂತ್ ಟ್ರೋಫಿ 2023 ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!