23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು.

ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕಾಗದ ತಯಾರಿಕೆಯಿಂದ ಬರೆಯಲು ಬೇಕಾದ ವಿವಿಧ ಪುಸ್ತಕ, ಪೇಪರ್ ಶೀಟ್ ಗಳ ತಯಾರಿಯನ್ನು ವಿವಿಧ ಹಂತಗಳಲ್ಲಿ ಘಟಕದ ಆಯೋಜಕರು ವಿವರವಾದ ಮಾಹಿತಿಯನ್ನು ನೀಡಿದರು.

ಉಜಿರೆಯಲ್ಲಿರುವ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಘಟಕಕ್ಕೆ ಭೇಟಿ ನೀಡಿದಾಗ ವಸ್ತ್ರ ವಿನ್ಯಾಸದ ವಿವಿಧ ಮಜಲುಗಳನ್ನು ವಿವರಿಸಿ, ಒಂದು ಸಂಸ್ಥೆಯ ಆರಂಭದ ಉದ್ದೇಶ,ಲಾಭ ನಷ್ಟಗಳ ಪರಿಗಣನೆ, ಆರ್ಥಿಕ ಉತ್ತೇಜನ, ಉತ್ಪಾದಕರಿಗೆ ಯಾವ ರೀತಿಯಲ್ಲಿ ಪ್ರೋತ್ಸಾಹಿಸುವುದು, ವ್ಯವಹಾರದ ಸೂಕ್ಷ್ಮ ಅನುಭವಗಳನ್ನು ವಿದ್ಯಾರ್ಥಿಗಳು ಸಂಸ್ಥೆಯ ನಿರ್ದೇಶಕರಾದ ಶ್ರೀ ಯತೀಶ್ ಶೆಟ್ಟಿ ಇವರಿಂದ ಮಾಹಿತಿಯನ್ನು ಪಡೆದುಕೊಂಡರು .ಒಂದು ದಿನದ ಪ್ರಾಯೋಗಿಕ ಅಭ್ಯಾಸವನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಚಾಲಕರ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿಯವರ ಪ್ರೋತ್ಸಾಹದಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಯಶಸ್ವಿಯಾಗಿ ನಡೆಸಿದರು. “ಕೋಶ ಓದು ದೇಶ ಸುತ್ತು” ಎಂಬಂತೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿಶೇಷವಾದ ಅನುಭವವನ್ನು ಪಡೆದರು. ಈ ಕಾರ್ಯಕ್ರಮವು ಯಶಸ್ವಿಯಾಗಲು ಎಲ್ಲಾ ಅಧಿಕಾರಿಗಳ ಸಹಭಾಗಿತ್ವ, ಮಾರ್ಗದರ್ಶನ ಕಾರಣವಾಗಿದೆ.

Related posts

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ದಿವ್ಯಜ್ಯೋತಿ ಶಾಲಾ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ “ನಂದಗೋಕುಲ” ಸ್ವ-ಸಹಾಯ ಸಂಘದ ರಚನೆ

Suddi Udaya

ಬೆಳ್ತಂಗಡಿ ‘ಶಾಂತಿಶ್ರೀ’ ಜೈನ ಮಹಿಳಾ ಸಮಾಜದಿಂದ ಮಹಿಳಾ ದಿನಾಚರಣೆ

Suddi Udaya

ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡೊಂಕುಬೆಟ್ಟು ವೀರಮ್ಮ ಸಂಜೀವ ಸಾಲಿಯಾನ್ ಕುಟುಂಬಸ್ಥರಿಂದ ಶ್ರೀ ಕೊಡಮಣಿತ್ತಾಯ ದೈವಕ್ಕೆ ಮರದ ಮಂಚ ಸಮರ್ಪಣೆ

Suddi Udaya
error: Content is protected !!