26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು.

ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕಾಗದ ತಯಾರಿಕೆಯಿಂದ ಬರೆಯಲು ಬೇಕಾದ ವಿವಿಧ ಪುಸ್ತಕ, ಪೇಪರ್ ಶೀಟ್ ಗಳ ತಯಾರಿಯನ್ನು ವಿವಿಧ ಹಂತಗಳಲ್ಲಿ ಘಟಕದ ಆಯೋಜಕರು ವಿವರವಾದ ಮಾಹಿತಿಯನ್ನು ನೀಡಿದರು.

ಉಜಿರೆಯಲ್ಲಿರುವ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಘಟಕಕ್ಕೆ ಭೇಟಿ ನೀಡಿದಾಗ ವಸ್ತ್ರ ವಿನ್ಯಾಸದ ವಿವಿಧ ಮಜಲುಗಳನ್ನು ವಿವರಿಸಿ, ಒಂದು ಸಂಸ್ಥೆಯ ಆರಂಭದ ಉದ್ದೇಶ,ಲಾಭ ನಷ್ಟಗಳ ಪರಿಗಣನೆ, ಆರ್ಥಿಕ ಉತ್ತೇಜನ, ಉತ್ಪಾದಕರಿಗೆ ಯಾವ ರೀತಿಯಲ್ಲಿ ಪ್ರೋತ್ಸಾಹಿಸುವುದು, ವ್ಯವಹಾರದ ಸೂಕ್ಷ್ಮ ಅನುಭವಗಳನ್ನು ವಿದ್ಯಾರ್ಥಿಗಳು ಸಂಸ್ಥೆಯ ನಿರ್ದೇಶಕರಾದ ಶ್ರೀ ಯತೀಶ್ ಶೆಟ್ಟಿ ಇವರಿಂದ ಮಾಹಿತಿಯನ್ನು ಪಡೆದುಕೊಂಡರು .ಒಂದು ದಿನದ ಪ್ರಾಯೋಗಿಕ ಅಭ್ಯಾಸವನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಚಾಲಕರ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿಯವರ ಪ್ರೋತ್ಸಾಹದಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಯಶಸ್ವಿಯಾಗಿ ನಡೆಸಿದರು. “ಕೋಶ ಓದು ದೇಶ ಸುತ್ತು” ಎಂಬಂತೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿಶೇಷವಾದ ಅನುಭವವನ್ನು ಪಡೆದರು. ಈ ಕಾರ್ಯಕ್ರಮವು ಯಶಸ್ವಿಯಾಗಲು ಎಲ್ಲಾ ಅಧಿಕಾರಿಗಳ ಸಹಭಾಗಿತ್ವ, ಮಾರ್ಗದರ್ಶನ ಕಾರಣವಾಗಿದೆ.

Related posts

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya

ಅ.ಭಾ.ಸಾ.ಪ. ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಗೀತೆ ಜತೆ ಸಾಹಿತ್ಯ ಸಾಂಗತ್ಯ ಉಪನ್ಯಾಸ ಮಾಲಿಕೆಯ ಮೊದಲ ಅಧ್ಯಾಯ

Suddi Udaya

ವಿಜಯ ಕ್ರೆಡಿಟ್ ಕೋ‌ ಅಪರೇಟೀವ್ ಸೊಸೈಟಿ ಬೆಳ್ತಂಗಡಿ ರೂ.1,848 ಕೋಟಿ ವಾಷಿ೯ಕ ವ್ಯವಹಾರ: ರೂ.5 ಕೋಟಿ ರೂ ನಿವ್ವಳ ಲಾಭ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ರವರ ನಾಮಪತ್ರ ಸಲ್ಲಿಕೆ ಕಾರ್ಯಕ್ರಮದ ಅಂಗವಾಗಿ ಕಾಂಗ್ರೆಸ್ ಕಾರ್ಯಕರ್ತರ ಸಭೆ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ : ವೀಲ್ ಚೇರ್ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಂ ಪಿ.ಯು. ಕಾಲೇಜಿನ ವಿದ್ಯಾರ್ಥಿಗಳಿಂದ ಸಿಯೋನ್ ಆಶ್ರಮ ಟ್ರಸ್ಟ್‌ಗೆ ಭೇಟಿ

Suddi Udaya
error: Content is protected !!