22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಬೆಳ್ತಂಗಡಿ: ಮಹಿಳಾ ವೃಂದದಲ್ಲಿ ಝೇಂಕಾರ ಬೇಸಿಗೆ ಶಿಬಿರದ ಉದ್ಘಾಟನೆ

Suddi Udaya

ಉಜಿರೆ ಶ್ರೀ ಜನಾರ್ಧನ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭೇಟಿ

Suddi Udaya

ಕಾಶ್ಮೀರ ಉಗ್ರಗಾಮಿ ದಾಳಿ: ಶಾಂತಿ ಮತ್ತು ಮಾನವೀಯತೆಗೆ ಎದುರಾದ ಹೊಡೆತ: ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಡಾ|| ಹೇಮಾವತಿ ವೀ. ಹೆಗ್ಗಡೆಯವರ ಹುಟ್ಟುಹಬ್ಬ: ಶ್ರೀ ಕ್ಷೇ ಧ ಗ್ರಾ ಯೋಜನೆಯ ಅಳದಂಗಡಿ ವಲಯದ ವಾತ್ಸಲ್ಯ ಕುಟುಂಬದ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!