24.2 C
ಪುತ್ತೂರು, ಬೆಳ್ತಂಗಡಿ
May 26, 2025
ತಾಲೂಕು ಸುದ್ದಿಪ್ರಮುಖ ಸುದ್ದಿಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ ೧೦ ಗಂಟೆಗೆ ಹೋದಂತಹ ಕರೆಂಟ್ ಬರುವುದು ಬೆಳಗ್ಗೆ. ಸಂಜೆ ಏನಾದರೂ ಫ್ಯೂಸ್ ಹೋಗಿದೆ ಎಂದು ದೂರು ನೀಡಿದರೆ ಅದನ್ನು ಪವರ್‌ಮ್ಯಾನ್‌ಗಳು ಮರುದಿನ ಬಂದು ಹಾಕುತ್ತಾರೆ.
ತೆಕ್ಕಾರು ಗ್ರಾಮದಲ್ಲಿ ಇಬ್ಬರು ಖಾಯಂ ಪವರ್‌ಮ್ಯಾನ್‌ಗಳು ಇದ್ದಾರೆ. ಎಲ್ಲಿಯಾದರು ವಿದ್ಯುತ್ ಕಂಬ, ತಂತಿ ಬಿದ್ದಿದೆ ಎಂದು ದೂರು ನೀಡಿದರೆ ಇವತ್ತು ಜನ ಇಲ್ಲ ನಾಳೆ ಬರುತ್ತೇವೆ ಎಂದು ಹೇಳಿ ಹೋಗುತ್ತಾರೆ. ಜನರಿಗೆ ಇದ್ದರಿಂದ ಸಮಸ್ಯೆ ಆಗುತ್ತಿದೆ.

ಪಂಚಾಯತ್‌ನಲ್ಲೂ ಸರಿಯಾಗಿ ಕರೆಂಟ್ ಇರುವುದಿಲ್ಲ. ಗ್ರಾಮಸ್ಥರು ಏನಾದರು ಕೆಲಸಕ್ಕಾಗಿ ಬಂದರೆ, ಎಲ್ಲಾ ಕೆಲಸಗಳು ಕಂಪ್ಯೂಟರ್‌ನಲ್ಲಿ ಆಗುವುದರಿಂದ ಸರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ, ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಕೆಲಸ ಮಾಡುವುದಿಲ್ಲ ಎಂದು ಹಿಡಿ ಶಾಪ ಹಾಕಿ ಹೋಗುತ್ತಾರೆ. ಮೇ ತಿಂಗಳಿನಲ್ಲಿಯೇ ಮರದ ಗೆಲ್ಲುಗಳನ್ನು ತೆಗೆಯುವಂತಹ ಕೆಲಸವನ್ನು ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya

ಡಿ. 21: ಬೆಳ್ತಂಗಡಿಯಲ್ಲಿ ಅಕ್ರಮ ಸಕ್ರಮ ಸಮಿತಿ ಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ 2ನೇ ಬಾರಿ ಎನ್.ಎ.ಬಿ.ಹೆಚ್ ಪ್ರಮಾಣಪತ್ರ

Suddi Udaya

ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರಿಂದ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮಿತ್ತಬಾಗಿಲು: ವಿಷಸೇವಿಸಿ ಆತ್ಯಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya
error: Content is protected !!