September 6, 2026
ತಾಲೂಕು ಸುದ್ದಿಪ್ರಮುಖ ಸುದ್ದಿಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ ೧೦ ಗಂಟೆಗೆ ಹೋದಂತಹ ಕರೆಂಟ್ ಬರುವುದು ಬೆಳಗ್ಗೆ. ಸಂಜೆ ಏನಾದರೂ ಫ್ಯೂಸ್ ಹೋಗಿದೆ ಎಂದು ದೂರು ನೀಡಿದರೆ ಅದನ್ನು ಪವರ್‌ಮ್ಯಾನ್‌ಗಳು ಮರುದಿನ ಬಂದು ಹಾಕುತ್ತಾರೆ.
ತೆಕ್ಕಾರು ಗ್ರಾಮದಲ್ಲಿ ಇಬ್ಬರು ಖಾಯಂ ಪವರ್‌ಮ್ಯಾನ್‌ಗಳು ಇದ್ದಾರೆ. ಎಲ್ಲಿಯಾದರು ವಿದ್ಯುತ್ ಕಂಬ, ತಂತಿ ಬಿದ್ದಿದೆ ಎಂದು ದೂರು ನೀಡಿದರೆ ಇವತ್ತು ಜನ ಇಲ್ಲ ನಾಳೆ ಬರುತ್ತೇವೆ ಎಂದು ಹೇಳಿ ಹೋಗುತ್ತಾರೆ. ಜನರಿಗೆ ಇದ್ದರಿಂದ ಸಮಸ್ಯೆ ಆಗುತ್ತಿದೆ.

ಪಂಚಾಯತ್‌ನಲ್ಲೂ ಸರಿಯಾಗಿ ಕರೆಂಟ್ ಇರುವುದಿಲ್ಲ. ಗ್ರಾಮಸ್ಥರು ಏನಾದರು ಕೆಲಸಕ್ಕಾಗಿ ಬಂದರೆ, ಎಲ್ಲಾ ಕೆಲಸಗಳು ಕಂಪ್ಯೂಟರ್‌ನಲ್ಲಿ ಆಗುವುದರಿಂದ ಸರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ, ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಕೆಲಸ ಮಾಡುವುದಿಲ್ಲ ಎಂದು ಹಿಡಿ ಶಾಪ ಹಾಕಿ ಹೋಗುತ್ತಾರೆ. ಮೇ ತಿಂಗಳಿನಲ್ಲಿಯೇ ಮರದ ಗೆಲ್ಲುಗಳನ್ನು ತೆಗೆಯುವಂತಹ ಕೆಲಸವನ್ನು ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಹಾವಳಿ : ಕೃಷಿ ಹಾನಿ

Suddi Udaya

ಬಿಜೆಪಿ ಆಡಳಿತದಲ್ಲಿ ಮಂಜೂರುಗೊಂಡ ಕಾಮಗಾರಿಗಳನ್ನು ತನ್ನದೆಂದು ಬಿಂಬುಸುವುದೇ ಸ್ಥಳೀಯ ಕಾಂಗ್ರೆಸಿಗರ ಸಾಧನೆ: ಪ್ರಕಾಶ್ ಎಳನೀರು

Suddi Udaya

ಬಳಂಜ : 90 ವರ್ಷದ ವೆಂಕಮ್ಮ ರವರಿಂದ ಮತ ಚಲಾವಣೆ

Suddi Udaya

ಕಾಶಿಪಟ್ಣ ಕೇಳದಪೇಟೆ ಮಸೀದಿಗೆ ಖಾಝಿಯಾಗಿ ತ್ವಾಖಾ ಉಸ್ತಾದ್ ಅಧಿಕಾರ ಸ್ವೀಕಾರ

Suddi Udaya

ಉಜಿರೆ ಯುವವಾಹಿನಿ ಸಂಚಲನ ಸಮಿತಿಯ ಅಧ್ಯಕ್ಷರಾಗಿ ರಿತೇಶ್ ರೆಂಜಾಳ ಮತ್ತು ಕಾರ್ಯದರ್ಶಿಯಾಗಿ ಉದಯ ಮಾಚಾರ್ ಆಯ್ಕೆ‌

Suddi Udaya

ಸಂವಿಧಾನ ದಿನಾಚರಣೆ ಪ್ರಯುಕ್ತ ನಡೆದ ಸ್ಪರ್ಧೆಯಲ್ಲಿ ಹೊಸಂಗಡಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!