23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪ್ರಮುಖ ಸುದ್ದಿಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ ೧೦ ಗಂಟೆಗೆ ಹೋದಂತಹ ಕರೆಂಟ್ ಬರುವುದು ಬೆಳಗ್ಗೆ. ಸಂಜೆ ಏನಾದರೂ ಫ್ಯೂಸ್ ಹೋಗಿದೆ ಎಂದು ದೂರು ನೀಡಿದರೆ ಅದನ್ನು ಪವರ್‌ಮ್ಯಾನ್‌ಗಳು ಮರುದಿನ ಬಂದು ಹಾಕುತ್ತಾರೆ.
ತೆಕ್ಕಾರು ಗ್ರಾಮದಲ್ಲಿ ಇಬ್ಬರು ಖಾಯಂ ಪವರ್‌ಮ್ಯಾನ್‌ಗಳು ಇದ್ದಾರೆ. ಎಲ್ಲಿಯಾದರು ವಿದ್ಯುತ್ ಕಂಬ, ತಂತಿ ಬಿದ್ದಿದೆ ಎಂದು ದೂರು ನೀಡಿದರೆ ಇವತ್ತು ಜನ ಇಲ್ಲ ನಾಳೆ ಬರುತ್ತೇವೆ ಎಂದು ಹೇಳಿ ಹೋಗುತ್ತಾರೆ. ಜನರಿಗೆ ಇದ್ದರಿಂದ ಸಮಸ್ಯೆ ಆಗುತ್ತಿದೆ.

ಪಂಚಾಯತ್‌ನಲ್ಲೂ ಸರಿಯಾಗಿ ಕರೆಂಟ್ ಇರುವುದಿಲ್ಲ. ಗ್ರಾಮಸ್ಥರು ಏನಾದರು ಕೆಲಸಕ್ಕಾಗಿ ಬಂದರೆ, ಎಲ್ಲಾ ಕೆಲಸಗಳು ಕಂಪ್ಯೂಟರ್‌ನಲ್ಲಿ ಆಗುವುದರಿಂದ ಸರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ, ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಕೆಲಸ ಮಾಡುವುದಿಲ್ಲ ಎಂದು ಹಿಡಿ ಶಾಪ ಹಾಕಿ ಹೋಗುತ್ತಾರೆ. ಮೇ ತಿಂಗಳಿನಲ್ಲಿಯೇ ಮರದ ಗೆಲ್ಲುಗಳನ್ನು ತೆಗೆಯುವಂತಹ ಕೆಲಸವನ್ನು ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya

ಮೊಗ್ರು ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಸಭೆ; ನೂತನ ಸಮಿತಿ ರಚನೆ

Suddi Udaya

ಅಳದಂಗಡಿ ಶ್ರೀ ಸತ್ಯ ದೇವತೆಗೆ ಹರಕೆ ರೂಪದಲ್ಲಿ ಗಗ್ಗರ ಸಮಪ೯ಣೆ

Suddi Udaya

ತೋಟತ್ತಾಡಿ: ಅರಂತಬೈಲು ಶ್ರೀ ಉಳ್ಳಾಲ್ತಿ ಭಜನಾ ಮಂದಿರದಲ್ಲಿ ನವರಾತ್ರಿ ಭಜನಾ ಕಾರ್ಯಕ್ರಮ ಉದ್ಘಾಟನೆ

Suddi Udaya

ಡಿ.27ರಂದು ನಡೆಯಬೇಕಾಗಿದ್ದ ಮಿತ್ತಬಾಗಿಲು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ ರದ್ದು

Suddi Udaya

ರೆಖ್ಯ : ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಕರಕಲಾದ ಮನೆ

Suddi Udaya
error: Content is protected !!