37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು ಶಾಲೆಗೆ ರಾಷ್ಟ್ರ ಮಟ್ಟದಲ್ಲಿ ಹೆಸರು ತಂದುಕೊಟ್ಟ ದೈಹಿಕ ಶಿಕ್ಷಕ ಪ್ರಶಾಂತ್ ಮರೋಡಿ ಕೂಕ್ರಬೆಟ್ಟು ಶಾಲೆಗೆ ವರ್ಗಾವಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ದೈಹಿಕ ಶಿಕ್ಷಕ ಮರೋಡಿ ಗ್ರಾಮದ ಪ್ರಶಾಂತ್ ಅವರು ಇನ್ನು ಮುಂದೆ ತಮ್ಮ ಸ್ವ ಗ್ರಾಮದ ಶಾಲೆ ಕೂಕ್ರಬೆಟ್ಟು ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಲಿದ್ದಾರೆ.

ಸುಮಾರು 17 ವರ್ಷಗಳಿಂದ ಬೆಳ್ತಂಗಡಿ ತಾಲೂಕಿನ ಬಂದಾರು ದ.ಕ.ಜಿ.ಪಂ.ಉ.ಪ್ರಾ ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ತಮ್ಮ ಶಿಷ್ಯವೃಂದ ಕ್ರೀಡಾ ಕ್ಷೇತ್ರದಲ್ಲಿ ಅತ್ಯುನ್ನತ ಸಾಧನೆ ಮಾಡಲು ಕಾರಣೀಭೂತರಾಗಿದ್ದಾರೆ.ತಮ್ಮ ಶಾಲಾ ಹಂತದಲ್ಲೇ ಕ್ರೀಡಾ ಚಟುವಟಿಕೆಗಳಲ್ಲಿ ಸಾಧನೆಗೈದು ,ಅದೇ ಕ್ಷೇತ್ರದಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ತಮ್ಮ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಉನ್ನತ ಸಾಧನೆ ಮಾಡುವಂತೆ ಪ್ರೋತ್ಸಾಹಿಸಿದ್ದರು. ಇವರಿಂದ ತರಬೇತಿ ಪಡೆದ ಬಂದಾರು ಶಾಲೆಯ ಮಕ್ಕಳು ಪ್ರತೀ ವರ್ಷ ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ,ರಾಷ್ಟ್ರ ಮಟ್ಟದವರೆಗೂ ತಲುಪಿ ಗಮನೀಯ ಸಾಧನೆ ಮಾಡಿದ್ದಾರೆ .ಚೆನ್ನೈನಲ್ಲಿ ನಡೆದ ರಾಷ್ಟ್ರಮಟ್ಟದ ಖೇಲೋ ಇಂಡಿಯಾ ಕ್ರೀಡಾಕೂಟದ ವಾಲಿಬಾಲ್ ಸ್ಪರ್ಧೆಯಲ್ಲಿ ಬಂದಾರು ಶಾಲೆಯ 3 ವಿದ್ಯಾರ್ಥಿನಿಯರು ಕರ್ನಾಟಕ ರಾಜ್ಯ ತಂಡದಿಂದ ಆಯ್ಕೆಯಾಗಿ ಕಂಚಿನ ಪದಕ ಪಡೆದಿರುತ್ತಾರೆ .ಇವರ ಗರಡಿಯಲ್ಲಿ ಪಳಗಿದ 16 ಕ್ರೀಡಾಪಟುಗಳು ರಾಷ್ಟ್ರ ಮಟ್ಟಕ್ಕೆ, 20 ಕ್ಕೂ ಅಧಿಕ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಹಾಗು 45 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮೈಸೂರು ವಿಭಾಗಕ್ಕೆ ಆಯ್ಕೆಯಾಗಿರುವುದು ಇವರ ಕಾರ್ಯ ಕ್ಷಮತೆ ,ಪ್ರಾಮಾಣಿಕ ಸೇವೆಗೆ ಸಂದ ಗೌರವ.ಪ್ರಶಾಂತ್ ಅವರು ತಾಲೂಕಿನ ಕೂಕ್ರಬೆಟ್ಟು ಶಾಲೆಯಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಲಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನ ಇಂದುಮತಿಗೆ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ

Suddi Udaya

ಧರ್ಮಸ್ಥಳಕ್ಕೆ ಬಂದಿದ್ದ ಮಹಿಳೆಯ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್, ಪದವಿ ಪೂರ್ವ ಹಾಗೂ ಪ್ರೌಢಶಾಲಾ ವಿಭಾಗದ ಜಂಟಿ ಆಶ್ರಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ನೀಟ್ ಫಲಿತಾಂಶದಲ್ಲಿ ರಾಷ್ಟ್ರಮಟ್ಟದಲ್ಲಿ ಅಮೋಘ ಸಾಧನೆ ಮಾಡಿದ ಪ್ರಜ್ವಲ್ ಹೆಚ್.ಎಂ. ಗೆ ಎಕ್ಸೆಲ್ ಕಾಲೇಜಿನ ವತಿಯಿಂದ ಭವ್ಯ ಮೆರವಣಿಗೆ ಮೂಲಕ ಗೌರರ್ವಾಪಣೆ

Suddi Udaya

ಬಂದಾರು ಸ.ಹಿ.ಪ್ರಾ. ಶಾಲೆಯ ನಲಿಕಲಿ ಮಕ್ಕಳು ಮತ್ತು ಶಿಕ್ಷಕರು ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ

Suddi Udaya
error: Content is protected !!