24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ವಿತರಣೆಯನ್ನು ಮಾಡಲಾಯಿತು.


ಈ ಸಂಬಂಧವಾಗಿ ಜರಗಿದ ಸಭೆಯಲ್ಲಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ, ಕಾರ್ಯದರ್ಶಿಗಳಾದ ಮಹಮ್ಮದ್ ಶರೀಫ್ ರವರು ಪಾಸನ್ನು ವಿತರಿಸಿ ಶುಭಹಾರೈಸಿದರು. ಉಜಿರೆ, ಓಡಲ, ಮಾಚಾರು, ನಾರ್ಯ, ಕಾಡಂಡ, ದೊಂಪದಪಲ್ಕೆ, ಮಾಯ ಈ ಭಾಗದಿಂದ ಬಸ್ಸಿನಲ್ಲಿ ಬರುವ 23 ಮಂದಿ ವಿದ್ಯಾರ್ಥಿಗಳು ಉಚಿತ ಪಾಸನ್ನು ಸ್ವೀಕರಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಸ್ವಾಗತಿಸಿ ವಂದಿಸಿದರು. ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಕಾರ್ಯಕ್ರಮ ಸಂಯೋಜಿಸಿದರು.

Related posts

ಸವಣಾಲು ಅ. ಹಿ. ಪ್ರಾ. ಶಾಲೆಯ ನಡ್ತಿಕಲ್ಲುವಿನಲ್ಲಿ ಹಣ್ಣಿನ ಗಿಡನಾಟಿ

Suddi Udaya

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

Suddi Udaya

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya

ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಓಪರೇಟಿವ್ ಸೊಸೈಟಿಯಲ್ಲಿ ರೂ. 986 ಕೋಟಿ ಒಟ್ಟು ವ್ಯವಹಾರ, ರೂ.12.01 ಕೋಟಿ ನಿವ್ವಳ ಲಾಭ

Suddi Udaya

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ನಡ/ ಕನ್ಯಾಡಿ ಗ್ರಾಮ ಸಮಿತಿ ಮಹಿಳಾ ವೇದಿಕೆ ವತಿಯಿಂದ ಒಂಬತ್ತನೇ ವರ್ಷದ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya
error: Content is protected !!