24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು.

ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕಾಗದ ತಯಾರಿಕೆಯಿಂದ ಬರೆಯಲು ಬೇಕಾದ ವಿವಿಧ ಪುಸ್ತಕ, ಪೇಪರ್ ಶೀಟ್ ಗಳ ತಯಾರಿಯನ್ನು ವಿವಿಧ ಹಂತಗಳಲ್ಲಿ ಘಟಕದ ಆಯೋಜಕರು ವಿವರವಾದ ಮಾಹಿತಿಯನ್ನು ನೀಡಿದರು.

ಉಜಿರೆಯಲ್ಲಿರುವ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಘಟಕಕ್ಕೆ ಭೇಟಿ ನೀಡಿದಾಗ ವಸ್ತ್ರ ವಿನ್ಯಾಸದ ವಿವಿಧ ಮಜಲುಗಳನ್ನು ವಿವರಿಸಿ, ಒಂದು ಸಂಸ್ಥೆಯ ಆರಂಭದ ಉದ್ದೇಶ,ಲಾಭ ನಷ್ಟಗಳ ಪರಿಗಣನೆ, ಆರ್ಥಿಕ ಉತ್ತೇಜನ, ಉತ್ಪಾದಕರಿಗೆ ಯಾವ ರೀತಿಯಲ್ಲಿ ಪ್ರೋತ್ಸಾಹಿಸುವುದು, ವ್ಯವಹಾರದ ಸೂಕ್ಷ್ಮ ಅನುಭವಗಳನ್ನು ವಿದ್ಯಾರ್ಥಿಗಳು ಸಂಸ್ಥೆಯ ನಿರ್ದೇಶಕರಾದ ಶ್ರೀ ಯತೀಶ್ ಶೆಟ್ಟಿ ಇವರಿಂದ ಮಾಹಿತಿಯನ್ನು ಪಡೆದುಕೊಂಡರು .ಒಂದು ದಿನದ ಪ್ರಾಯೋಗಿಕ ಅಭ್ಯಾಸವನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಚಾಲಕರ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿಯವರ ಪ್ರೋತ್ಸಾಹದಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಯಶಸ್ವಿಯಾಗಿ ನಡೆಸಿದರು. “ಕೋಶ ಓದು ದೇಶ ಸುತ್ತು” ಎಂಬಂತೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿಶೇಷವಾದ ಅನುಭವವನ್ನು ಪಡೆದರು. ಈ ಕಾರ್ಯಕ್ರಮವು ಯಶಸ್ವಿಯಾಗಲು ಎಲ್ಲಾ ಅಧಿಕಾರಿಗಳ ಸಹಭಾಗಿತ್ವ, ಮಾರ್ಗದರ್ಶನ ಕಾರಣವಾಗಿದೆ.

Related posts

ಸಿರಿ ಸಂಸ್ಥೆಯ ಎಂ.ಡಿ. ಕೆ.ಎನ್ ಜನಾರ್ಧನರವರಿಗೆ ‘ಪ್ರತಿಷ್ಠಿತ ಮಹಾತ್ಮಗಾಂಧಿ ಸದ್ಭಾವನಾ ಅಂತಾರಾಷ್ಟ್ರೀಯ ಪ್ರಶಸ್ತಿ’: ಸಿರಿ ಸಿಬ್ಬಂದಿಗಳಿಂದ ಅಭಿನಂದನಾ ಕಾರ್ಯಕ್ರಮ

Suddi Udaya

ಭಾರತೀಯ ಜನತಾ ಪಾರ್ಟಿ ಶಕ್ತಿ ಕೇಂದ್ರ ಬೆಳಾಲು ಕಾರ್ಯಕರ್ತರಿಗೆ ಹಾಗೂ ಶಾಸಕರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ. ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಭಾ ಪುರಸ್ಕಾರ

Suddi Udaya

ಬಳಂಜ:ಯುವ ಬಿಲ್ಲವ ವೇದಿಕೆ ಅಧ್ಯಕ್ಷರಾಗಿ ಶರತ್ ಅಂಚನ್ ಆಯ್ಕೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya
error: Content is protected !!