25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು.

ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕಾಗದ ತಯಾರಿಕೆಯಿಂದ ಬರೆಯಲು ಬೇಕಾದ ವಿವಿಧ ಪುಸ್ತಕ, ಪೇಪರ್ ಶೀಟ್ ಗಳ ತಯಾರಿಯನ್ನು ವಿವಿಧ ಹಂತಗಳಲ್ಲಿ ಘಟಕದ ಆಯೋಜಕರು ವಿವರವಾದ ಮಾಹಿತಿಯನ್ನು ನೀಡಿದರು.

ಉಜಿರೆಯಲ್ಲಿರುವ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಘಟಕಕ್ಕೆ ಭೇಟಿ ನೀಡಿದಾಗ ವಸ್ತ್ರ ವಿನ್ಯಾಸದ ವಿವಿಧ ಮಜಲುಗಳನ್ನು ವಿವರಿಸಿ, ಒಂದು ಸಂಸ್ಥೆಯ ಆರಂಭದ ಉದ್ದೇಶ,ಲಾಭ ನಷ್ಟಗಳ ಪರಿಗಣನೆ, ಆರ್ಥಿಕ ಉತ್ತೇಜನ, ಉತ್ಪಾದಕರಿಗೆ ಯಾವ ರೀತಿಯಲ್ಲಿ ಪ್ರೋತ್ಸಾಹಿಸುವುದು, ವ್ಯವಹಾರದ ಸೂಕ್ಷ್ಮ ಅನುಭವಗಳನ್ನು ವಿದ್ಯಾರ್ಥಿಗಳು ಸಂಸ್ಥೆಯ ನಿರ್ದೇಶಕರಾದ ಶ್ರೀ ಯತೀಶ್ ಶೆಟ್ಟಿ ಇವರಿಂದ ಮಾಹಿತಿಯನ್ನು ಪಡೆದುಕೊಂಡರು .ಒಂದು ದಿನದ ಪ್ರಾಯೋಗಿಕ ಅಭ್ಯಾಸವನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಚಾಲಕರ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿಯವರ ಪ್ರೋತ್ಸಾಹದಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಯಶಸ್ವಿಯಾಗಿ ನಡೆಸಿದರು. “ಕೋಶ ಓದು ದೇಶ ಸುತ್ತು” ಎಂಬಂತೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿಶೇಷವಾದ ಅನುಭವವನ್ನು ಪಡೆದರು. ಈ ಕಾರ್ಯಕ್ರಮವು ಯಶಸ್ವಿಯಾಗಲು ಎಲ್ಲಾ ಅಧಿಕಾರಿಗಳ ಸಹಭಾಗಿತ್ವ, ಮಾರ್ಗದರ್ಶನ ಕಾರಣವಾಗಿದೆ.

Related posts

ಮೇ.3 : ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಅಳದಂಗಡಿಯಲ್ಲಿ ಬೈಕ್ ಅಪಘಾತ, ಚಿಕಿತ್ಸೆ ಫಲಕಾರಿಯಾಗದೆ ಸವಾರ ಸಾವು

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ

Suddi Udaya

ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ವತಿಯಿಂದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಪೂರ್ವ ಪ್ರಾಥಮಿಕ ವಿಭಾಗದ ಮಕ್ಕಳಿಗೆ ಪದವಿ ಪ್ರದಾನ ಕಾರ್ಯಕ್ರಮ ಮತ್ತು ಮಾತಾ-ಪಿತಾಮಹರ (ಹಿರಿಯರ) ದಿನ ಆಚರಣೆ.

Suddi Udaya

ವೇಣೂರು ಶ್ರೀ ಶಾರದಾ ಟ್ರಸ್ಟ್ ವತಿಯಿಂದ ವೇಣೂರು ಸ.ಪ್ರೌ. ಶಾಲಾ ಶಿಕ್ಷಕ ರವೀಂದ್ರ ಕೆ. ರವರಿಗೆ ಸನ್ಮಾನ

Suddi Udaya
error: Content is protected !!