September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಕೈಗಾರಿಕಾ ಘಟಕಗಳಿಗೆ ಭೇಟಿ

ವೇಣೂರು: ಕುಂಭಶ್ರೀ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ಪಡೆಯಲು ಕೈಗಾರಿಕಾ ಘಟಕಗಳಿಗೆ ಭೇಟಿಯನ್ನು ನೀಡಲಾಯಿತು.

ಗರ್ಡಾಡಿಯಲ್ಲಿರುವ ದಿಯಾ ಇಂಪ್ರೆಶನ್ಸ್ ಪುಸ್ತಕ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಕಾಗದ ತಯಾರಿಕೆಯಿಂದ ಬರೆಯಲು ಬೇಕಾದ ವಿವಿಧ ಪುಸ್ತಕ, ಪೇಪರ್ ಶೀಟ್ ಗಳ ತಯಾರಿಯನ್ನು ವಿವಿಧ ಹಂತಗಳಲ್ಲಿ ಘಟಕದ ಆಯೋಜಕರು ವಿವರವಾದ ಮಾಹಿತಿಯನ್ನು ನೀಡಿದರು.

ಉಜಿರೆಯಲ್ಲಿರುವ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಘಟಕಕ್ಕೆ ಭೇಟಿ ನೀಡಿದಾಗ ವಸ್ತ್ರ ವಿನ್ಯಾಸದ ವಿವಿಧ ಮಜಲುಗಳನ್ನು ವಿವರಿಸಿ, ಒಂದು ಸಂಸ್ಥೆಯ ಆರಂಭದ ಉದ್ದೇಶ,ಲಾಭ ನಷ್ಟಗಳ ಪರಿಗಣನೆ, ಆರ್ಥಿಕ ಉತ್ತೇಜನ, ಉತ್ಪಾದಕರಿಗೆ ಯಾವ ರೀತಿಯಲ್ಲಿ ಪ್ರೋತ್ಸಾಹಿಸುವುದು, ವ್ಯವಹಾರದ ಸೂಕ್ಷ್ಮ ಅನುಭವಗಳನ್ನು ವಿದ್ಯಾರ್ಥಿಗಳು ಸಂಸ್ಥೆಯ ನಿರ್ದೇಶಕರಾದ ಶ್ರೀ ಯತೀಶ್ ಶೆಟ್ಟಿ ಇವರಿಂದ ಮಾಹಿತಿಯನ್ನು ಪಡೆದುಕೊಂಡರು .ಒಂದು ದಿನದ ಪ್ರಾಯೋಗಿಕ ಅಭ್ಯಾಸವನ್ನು ಕುಂಭಶ್ರೀ ವಿದ್ಯಾ ಸಂಸ್ಥೆಯ ಸಂಚಾಲಕರ ಮಾರ್ಗದರ್ಶನದಲ್ಲಿ ಆಡಳಿತಾಧಿಕಾರಿಯವರ ಪ್ರೋತ್ಸಾಹದಿಂದ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಯಶಸ್ವಿಯಾಗಿ ನಡೆಸಿದರು. “ಕೋಶ ಓದು ದೇಶ ಸುತ್ತು” ಎಂಬಂತೆ ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ವಿಶೇಷವಾದ ಅನುಭವವನ್ನು ಪಡೆದರು. ಈ ಕಾರ್ಯಕ್ರಮವು ಯಶಸ್ವಿಯಾಗಲು ಎಲ್ಲಾ ಅಧಿಕಾರಿಗಳ ಸಹಭಾಗಿತ್ವ, ಮಾರ್ಗದರ್ಶನ ಕಾರಣವಾಗಿದೆ.

Related posts

ನಾವೂರು ಸ.ಹಿ.ಪ್ರಾ. ಶಾಲಾ ಪ್ರಾರಂಭೋತ್ಸವ ಹಾಗೂ ನೂತನ ಎಲ್ ಕೆಜಿ ತರಗತಿ ಪ್ರಾರಂಭ

Suddi Udaya

ಉಜಿರೆ : ಅತ್ತಾಜೆ ಶತಾಯುಷಿ ಬಿಫಾತಿಮಾ ನಿಧನ

Suddi Udaya

ಫ್ರೆಂಡ್ಸ್ ಬದ್ಯಾರು ತಂಡ ಸದಸ್ಯರಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ರಾಜೇಶ್ ರವರಿಗೆ ಧನಸಹಾಯ

Suddi Udaya

ಬೆಳಾಲು ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಮಾಧವ ಗೌಡ ಓಣಾಜೆ

Suddi Udaya

ನಿವೃತ್ತ ಸಾಧಕ ಯೋಧ ಪ್ರಶಸ್ತಿ ಸ್ವೀಕರಿಸಿ ಆಗಮಿಸಿದ ಲ| ಡಾ.ಗೋಪಾಲಕೃಷ್ಣ ಕಾಂಚೋಡು: ಉಜಿರೆಯಲ್ಲಿ ಭವ್ಯವಾದ ಸ್ವಾಗತ – ಅಭಿನಂದನೆ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಹಪ್ಪಳ ಸಂಡಿಗೆ, ಉಪ್ಪಿನ ಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯ ಸಮಾರೋಪ ಸಮಾರಂಭ

Suddi Udaya
error: Content is protected !!