32.9 C
ಪುತ್ತೂರು, ಬೆಳ್ತಂಗಡಿ
March 6, 2026
Uncategorized

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಮಾನಸಿಕ ಅಸ್ವಸ್ಥ ರಂತೆ ತಿರುಗಾಡುತಿದ್ದ ವ್ಯಕ್ತಿ ಇಂಟರ್ನ್ಯಾಷನಲ್ ಸೀನಿಯರ್ ಚೇಂಬರ್ ಮತ್ತಿತರರು ಸೇರಿ ಬೆಂಗಳೂರಿನ ಜನ ಸ್ನೇಹಿ ಆಶ್ರಮಕ್ಕೆ ಕಳುಹಿಸಿದ ಘಟನೆ ಜು.23 ರಂದು ನಡೆದಿದೆ.

ಸುಮಾರು ದಿನಗಳಿಂದ ಸುಬ್ರಹ್ಮಣ್ಯದ ಆಸು ಪಾಸಿನಲ್ಲಿ ತಿರುಗಾಡುತ್ತಾ ಮತ್ತು ರೋಡ್ ಬದಿಯಲ್ಲಿ ಮಲಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಇಂಟರ್ನ್ಯಾಷನಲ್ ಸೀನಿಯರ್ ಚೇಂಬರ್ ನ ಅಧ್ಯಕ್ಷರಾದ ಡಾ. ರವಿ ಕಕ್ಕೆ ಪದವು ಅವರಿಗೆ ತಿಳಿಸಿದರು .

ಡಾ| ರವಿ ಕಕ್ಕೆಪದವುರವರು ವಿಚಾರಿಸಿದಾಗ ನನ್ನ ಊರು ಕೊಯಮತ್ತೂರ್ ನನ್ನನ್ನು ನನ್ನ ತಾಯಿ ಬಿಟ್ಟು ಹೋಗಿದ್ದಾರೆ ಇಂದು ತಿಳಿಸಿದರು.

ಇದನ್ನು ಮನಗಂಡ ರವಿಕಕ್ಕೆಪದವು, ಶಿವ ಭಟ್, ರಾಧಾಕೃಷ್ಣ, ಹರೀಶ್‌ ಇಂಜಾಡಿ, ಗ್ರಾಮ ಪಂಚಾಯತ್ ಮತ್ತಿತರರು ಸೇರಿ ಈ ವ್ಯವಸ್ಥೆ ಮಾಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆ್ಯಂಬುಲೆನ್ಸ್ ಮೂಲಕ ಕಳುಹಿಸಿ ಕೊಡಲಾಯಿತು . ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಎ.ಸಿ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಠಾಣೆಯ ಸಹಾಯ ಪಡೆಯಲಾಯಿತು.

ಶಿವ ಭಟ್ ರವರು ಕೊಯಮುತ್ತೂರಿನ ಸ್ಥಳಿಯ ಆಶ್ರಮಕ್ಕೆ ವಿಷಯವನ್ನು ತಿಳಿಸಿದಾಗ ಶಿವ ಭಟ್ ರವರು ಅವರ ಫೋನ್ ನಂಬರ್ ಗಳನ್ನು ತೆಗೆದುಕೊಂಡು ಅವರ ಮನೆ ಅವರಿಗೆ ತಿಳಿಸಿದಾಗ ನಾವು ಅವರನ್ನು ತುಂಬಾ ಹುಡುಕಾಡುತ್ತಿದ್ದೆವು ಎಂದು ತಿಳಿಸಿದರು . ನಾವು ಇವತ್ತೇ ಅವನನ್ನು ಕರೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು. ಆಗ ಜನಸ್ನೇಹಿ ಆಶ್ರಮಕ್ಕೆ ಸೇರಿಸಲಾಗಿದೆ ಎಂದು ತಿಳಿಸಿದರು .

ಅವರ ತಾಯಿ ನನ್ನ ಮಗನನ್ನು ಹುಡುಕಿಕೊಟ್ಟದ್ದಕ್ಕಾಗಿ ರವಿಕಕ್ಕೆಪದವು, ಶಿವ ಭಟ್, ರಾಧಾಕೃಷ್ಣ, ಹರೀಶ್‌ ಇಂಜಾಡಿ, ಮತ್ತಿತರರಿಗೆ ಧನ್ಯವಾದವನ್ನು ತಿಳಿಸಿದರು.

Related posts

ನಿಡ್ಲೆ: ನಿವೃತ್ತ ಶಿಕ್ಷಕ ರಾಮಣ್ಣ ಪೂಜಾರಿ ನಿಧನ

Suddi Udaya

ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘ – ಧರ್ಮಸ್ಥಳ ಸ್ವ ಸಹಾಯ ಸಂಘಗಳ ಒಕ್ಕೂಟದಿಂದ ಆಟಿಡೊಂಜಿ ದಿನ ಕಾರ್ಯಕ್ರಮ ಭಾಷೆಯಿಂದ ಸಂಸ್ಕೃತಿ ಉಳಿಯಲು ಸಾಧ್ಯ: ಪ್ರಸಾದ್ ಶೆಟ್ಟಿ ಎಣಿಂಜೆ

Suddi Udaya

ಶಿರ್ಲಾಲು ಕೆಮ್ಮಡೆ ನಿವಾಸಿ ಶ್ರೀಮತಿ ವಾರಿಜ ನಿಧನ

Suddi Udaya

ನಾಲ್ಕೂರು: ನಿಟ್ಟಡ್ಕ, ಪುಣ್ಕೆದೊಟ್ಟು, ಪರಿಸರದಲ್ಲಿ ಹೆಚ್ಚಿದ ಚಿರತೆ ಕಾಟ, ಭಯಭೀತರಾದ ಗ್ರಾಮಸ್ಥರು

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ ಹಾಗೂ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಭಾರಿ ಗಾಳಿ ಮಳೆ: ಮುಂಡ್ರುಪ್ಪಾಡಿ ಶಾಲೆತಡ್ಕ ರಾಮಣ್ಣ ಗೌಡರವರ ಮನೆ ಹಾಗೂ ಕೊಟ್ಟಿಗೆಗೆ ಹಾನಿ

Suddi Udaya
error: Content is protected !!