24 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಸುಬ್ರಹ್ಮಣ್ಯದಲ್ಲಿದ್ದ ನಿರ್ಗತಿಕ ಬೆಂಗಳೂರಿನ ಜನ ಸ್ನೇಹಿ ಕೇಂದ್ರಕ್ಕೆ

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ಮಾನಸಿಕ ಅಸ್ವಸ್ಥ ರಂತೆ ತಿರುಗಾಡುತಿದ್ದ ವ್ಯಕ್ತಿ ಇಂಟರ್ನ್ಯಾಷನಲ್ ಸೀನಿಯರ್ ಚೇಂಬರ್ ಮತ್ತಿತರರು ಸೇರಿ ಬೆಂಗಳೂರಿನ ಜನ ಸ್ನೇಹಿ ಆಶ್ರಮಕ್ಕೆ ಕಳುಹಿಸಿದ ಘಟನೆ ಜು.23 ರಂದು ನಡೆದಿದೆ.

ಸುಮಾರು ದಿನಗಳಿಂದ ಸುಬ್ರಹ್ಮಣ್ಯದ ಆಸು ಪಾಸಿನಲ್ಲಿ ತಿರುಗಾಡುತ್ತಾ ಮತ್ತು ರೋಡ್ ಬದಿಯಲ್ಲಿ ಮಲಗುತ್ತಿದ್ದರು. ಇದನ್ನು ಕಂಡ ಸ್ಥಳೀಯರು ಇಂಟರ್ನ್ಯಾಷನಲ್ ಸೀನಿಯರ್ ಚೇಂಬರ್ ನ ಅಧ್ಯಕ್ಷರಾದ ಡಾ. ರವಿ ಕಕ್ಕೆ ಪದವು ಅವರಿಗೆ ತಿಳಿಸಿದರು .

ಡಾ| ರವಿ ಕಕ್ಕೆಪದವುರವರು ವಿಚಾರಿಸಿದಾಗ ನನ್ನ ಊರು ಕೊಯಮತ್ತೂರ್ ನನ್ನನ್ನು ನನ್ನ ತಾಯಿ ಬಿಟ್ಟು ಹೋಗಿದ್ದಾರೆ ಇಂದು ತಿಳಿಸಿದರು.

ಇದನ್ನು ಮನಗಂಡ ರವಿಕಕ್ಕೆಪದವು, ಶಿವ ಭಟ್, ರಾಧಾಕೃಷ್ಣ, ಹರೀಶ್‌ ಇಂಜಾಡಿ, ಗ್ರಾಮ ಪಂಚಾಯತ್ ಮತ್ತಿತರರು ಸೇರಿ ಈ ವ್ಯವಸ್ಥೆ ಮಾಡಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಆ್ಯಂಬುಲೆನ್ಸ್ ಮೂಲಕ ಕಳುಹಿಸಿ ಕೊಡಲಾಯಿತು . ಈ ಬಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತಾಧಿಕಾರಿ ಎ.ಸಿ, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಠಾಣೆಯ ಸಹಾಯ ಪಡೆಯಲಾಯಿತು.

ಶಿವ ಭಟ್ ರವರು ಕೊಯಮುತ್ತೂರಿನ ಸ್ಥಳಿಯ ಆಶ್ರಮಕ್ಕೆ ವಿಷಯವನ್ನು ತಿಳಿಸಿದಾಗ ಶಿವ ಭಟ್ ರವರು ಅವರ ಫೋನ್ ನಂಬರ್ ಗಳನ್ನು ತೆಗೆದುಕೊಂಡು ಅವರ ಮನೆ ಅವರಿಗೆ ತಿಳಿಸಿದಾಗ ನಾವು ಅವರನ್ನು ತುಂಬಾ ಹುಡುಕಾಡುತ್ತಿದ್ದೆವು ಎಂದು ತಿಳಿಸಿದರು . ನಾವು ಇವತ್ತೇ ಅವನನ್ನು ಕರೆದುಕೊಂಡು ಹೋಗುತ್ತೇವೆ ಎಂದು ತಿಳಿಸಿದರು. ಆಗ ಜನಸ್ನೇಹಿ ಆಶ್ರಮಕ್ಕೆ ಸೇರಿಸಲಾಗಿದೆ ಎಂದು ತಿಳಿಸಿದರು .

ಅವರ ತಾಯಿ ನನ್ನ ಮಗನನ್ನು ಹುಡುಕಿಕೊಟ್ಟದ್ದಕ್ಕಾಗಿ ರವಿಕಕ್ಕೆಪದವು, ಶಿವ ಭಟ್, ರಾಧಾಕೃಷ್ಣ, ಹರೀಶ್‌ ಇಂಜಾಡಿ, ಮತ್ತಿತರರಿಗೆ ಧನ್ಯವಾದವನ್ನು ತಿಳಿಸಿದರು.

Related posts

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಮೃತರಾದ ಭರತ್‌ ಭೂಷಣ್‌ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದ ಶಾಸಕ ಹರೀಶ್ ಪೂಂಜ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ

Suddi Udaya

ಬೆಳ್ತಂಗಡಿಯ ಜಗದೀಶ್ ಕುಲಾಲ್ ರವರಿಗೆ ಕುಂಬಾರರ ಸೇವಾ ಸಂಘದಿಂದ ಕ್ರೀಡಾ ರತ್ನ ಪ್ರಶಸ್ತಿ

Suddi Udaya

ಕುಪ್ಪೆಟ್ಟಿ ಸಮೀಪ ಗುಡ್ಡ ಜರಿದು ಅಪಾಯದ ಸ್ಥಿತಿ ನಿರ್ಮಾಣ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್ ಪದ್ಮನಾಭ ಮಾಣಿಂಜ, ಯುವವಾಹಿನಿ ಬೆಳ್ತಂಗಡಿ ಘಟಕದಿಂದ ನುಡಿ ನಮನ

Suddi Udaya

ಉಜಿರೆ ಟೆಕ್ಸ್ ಟೈಲ್ಸ್ ಉದ್ಯಮಿಯಿಂದ ಲೈಂಗಿಕ ದೌರ್ಜನ್ಯ ಆರೋಪ: ಕೆಲಸಕ್ಕೆ ಬಂದ ಮಹಿಳೆಯಿಂದ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲು

Suddi Udaya

ಉಜಿರೆ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ರಿಕ್ಷಾ

Suddi Udaya
error: Content is protected !!