23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಗುರುವಾಯನಕೆರೆಯಲ್ಲಿ ವ್ಯಕ್ತಿಯೋರ್ವ ಅನುಮಾನಸ್ಪದ ಸಾವು!!?

Suddi Udaya

ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಸ್ವಾತಂತ್ರೋತ್ಸವದ ಪ್ರಯುಕ್ತ ತಿರಂಗ ಯಾತ್ರೆ ಪಂಜಿನ ಮೆರವಣಿಗೆ

Suddi Udaya

ರಾಷ್ಟ್ರ ಮುದ್ರೆಯನ್ನು ಅತೀ ಚಿಕ್ಕ ಅಳತೆಯಲ್ಲಿ ಬಿಡಿಸಿ ಇಂಡಿಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಮೆಡಿಕಲ್ ವಿದ್ಯಾರ್ಥಿನಿ ಅಪೇಕ್ಷ ಎನ್.ಎಸ್ ಉಜಿರೆ

Suddi Udaya

ಮೇ 18: ವಿದ್ಯುತ್ ನಿಲುಗಡೆ

Suddi Udaya

ಬೆಳ್ತಂಗಡಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಜಿಲ್ಲಾ ಮಟ್ಟದ ಅತ್ಯುತ್ತಮ ರೆಡ್ ಕ್ರಾಸ್ ಘಟಕ ಹಾಗೂ ಅತ್ಯುತ್ತಮ ರೆಡ್ ಕ್ರಾಸ್ ಜೂನಿಯರ್ ಕೌನ್ಸಿಲರ್ ಪ್ರಶಸ್ತಿ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!