22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಎ.14: ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಲ್ಲಾಜೆ ನಾಮಪತ್ರ ಸಲ್ಲಿಕೆ

Suddi Udaya

ಭಾರೀ ಮಳೆ ಹಿನ್ನೆಲೆ: ಬೆಳ್ತಂಗಡಿಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿಷೇಧ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಹಿರಿಯ ಪತ್ರಕರ್ತ ಪ್ರೊ. ನಾ ’ವುಜಿರೆ’ಯವರಿಗೆ ಬೆಳ್ತಂಗಡಿ ಪತ್ರಕರ್ತರ ಸಂಘದಿಂದ ನುಡಿ ನಮನ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ವತಿಯಿಂದ ನಾರಾವಿ ಸ.ಉ.ಪ್ರಾಥಮಿಕ ಮತ್ತು ಪ್ರೌಢ ಶಾಲೆಗೆ ಬೆಂಚು ಡೆಸ್ಕ್ ವಿತರಣೆ

Suddi Udaya
error: Content is protected !!