September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ತಾಲೂಕಿನಲ್ಲಿ ಹದಗೆಟ್ಟಿರುವ ರಸ್ತೆ ಗುಂಡಿ ಮುಚ್ಚಲು ಗುತ್ತಿಗೆದಾರರೇ ಹಿಂದೇಟು: ಸಾಮಾಜಿಕ ಜಾಲ ತಾಣಗಳಲ್ಲಿ ಪೋಸ್ಟ್ ವೈರಲ್

ಬೆಳ್ತಂಗಡಿ : ಈಗಾಗಲೇ ಭಾರೀ ಮಳೆಯಿಂದಾಗಿ ತಾಲೂಕಿನ ಎಮ್.ಡಿ.ಆರ್ , ‍ಎಸ್.ಹೆಚ್ ಹಾಗೂ ಇನ್ನಿತರ ಮಾರ್ಗಗಳು ಗುಂಡಿ ಬಿದ್ದು ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ಓಡಾಡಲು ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.

ರಸ್ತೆ ನಿರ್ವಹಣೆ (maintenance work) ಇಲಾಖೆಯಿಂದ ಪ್ರಹಸನ ಪ್ರಾರಂಭವಾಗಿದೆ. ಇಲಾಖೆಗೆ ಬೇಕಾದ ಗುತ್ತಿಗೆದಾರರನ್ನು ಕರೆದು ಮುಂಗಡ (ಅಡ್ವಾನ್ಸ್ )ಆಗಿ ಚರಂಡಿ ದುರಸ್ತಿ, ಜಂಗಲ್ ಕಟ್ಟಿಂಗ್, ಹೊಂಡ ಮುಚ್ಚುವ ಕಾಮಗಾರಿಗಳನ್ನು ಯಾವುದೇ ಕರಾರು ಇಲ್ಲದೆ ಕ್ರಿಯಾಯೋಜನೆ ಇಲ್ಲದೆ ಅನುದಾನ ಇಲ್ಲದೆ ಪಿಡಬ್ಲ್ಯೂಡಿ ಯಲ್ಲಿ ಮಾಡಿಸುತ್ತಾರೆ. ಮುಂದೆ ಕ್ರಿಯಾಯೋಜನೆ ಅನುಮೋದನೆ (approval ) ಆಗಿ ಟೆಂಡರ್ ಆಗುತ್ತದೆ. ಟೆಂಡರ್ ನಲ್ಲಿ ಯಾವುದೇ ಗುತ್ತಿಗೆದಾರರು ಭಾಗವಹಿಸಬಹುದು. ಆವಾಗ ಮುಂಗಡ

(advance)ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ಚೊಂಬೇ ಗತಿ. ಆದುದರಿಂದ ಮುಂಗಡ ಕಾಮಗಾರಿಗಳನ್ನು ಮಾಡುವ ಗುತ್ತಿಗೆದಾರರು ಆಲೋಚಿಸಿ. ಸರಕಾರದ ಪಾವತಿಯ ಬಗ್ಗೆ ಈಗಾಗಲೇ ಗುತ್ತಿಗೆದಾರರು ಪಡುವ ಬವಣೆಯನ್ನು ಯಾವುದೇ ಚುನಾಯಿತ ಪ್ರತಿನಿಧಿಯಾಗಲಿ ಇಲಾಖಾಧಿಕಾರಿಗಳಿಗಾಗಲಿ ಪರಿಜ್ಞಾನ ಇರುವುದಿಲ್ಲ. ಆದುದರಿಂದ ಗುತ್ತಿಗೆದಾರರೇ ಎಚ್ಚರ ಎಚ್ಚರ….
ನಮ್ಮನ್ನು ಕೇಳುವವರು ಯಾರೂ ಇಲ್ಲ. ಕಳೆದ ಹಲವಾರು ವರ್ಷಗಳಿಂದ ಮುಂಗಡ ಕಾಮಗಾರಿಗಳನ್ನು ಮಾಡಿದ ಗುತ್ತಿಗೆದಾರರಿಗೆ ದೇವರೇ ಗತಿ….

  • ನೊಂದ ಗುತ್ತಿಗೆದಾರರು. ಎಂಬ ಪೋಸ್ಟ್ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗುತ್ತಿದೆ.

Related posts

ಮಚ್ಚಿನ : ಬಳ್ಳಮಂಜ ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಸಾರ್ವಜನಿಕ ಮೊಸರು ಕುಡಿಕೆ ಉತ್ಸವ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ಬರಾಯಕೆರೆ ಕಪ್ಪು ಕಲ್ಲು ಗಣಿಗಾರಿಕೆ ಸ್ಥಳಕ್ಕೆ ಬೆಳ್ತಂಗಡಿ ತಹಶೀಲ್ದಾರ್ ಭೇಟಿ

Suddi Udaya

ಮಚ್ಚಿನ: ನೆತ್ತರ ಸ. ಕಿ. ಪ್ರಾ. ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಬೆಳ್ತಂಗಡಿ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಧ್ವಜಾರೋಹಣ

Suddi Udaya

ಉಪ್ಪಾರಪಳಿಕೆ ಸರಕಾರಿ ಉ. ಹಿ.ಪ್ರಾ. ಶಾಲೆಯಲ್ಲಿ 400 ಅಡಿಕೆ ಗಿಡ ನೆಡುವ ಕಾರ್ಯಕ್ರಮ

Suddi Udaya
error: Content is protected !!