24.5 C
ಪುತ್ತೂರು, ಬೆಳ್ತಂಗಡಿ
May 26, 2025
ತಾಲೂಕು ಸುದ್ದಿಪ್ರಮುಖ ಸುದ್ದಿಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ ೧೦ ಗಂಟೆಗೆ ಹೋದಂತಹ ಕರೆಂಟ್ ಬರುವುದು ಬೆಳಗ್ಗೆ. ಸಂಜೆ ಏನಾದರೂ ಫ್ಯೂಸ್ ಹೋಗಿದೆ ಎಂದು ದೂರು ನೀಡಿದರೆ ಅದನ್ನು ಪವರ್‌ಮ್ಯಾನ್‌ಗಳು ಮರುದಿನ ಬಂದು ಹಾಕುತ್ತಾರೆ.
ತೆಕ್ಕಾರು ಗ್ರಾಮದಲ್ಲಿ ಇಬ್ಬರು ಖಾಯಂ ಪವರ್‌ಮ್ಯಾನ್‌ಗಳು ಇದ್ದಾರೆ. ಎಲ್ಲಿಯಾದರು ವಿದ್ಯುತ್ ಕಂಬ, ತಂತಿ ಬಿದ್ದಿದೆ ಎಂದು ದೂರು ನೀಡಿದರೆ ಇವತ್ತು ಜನ ಇಲ್ಲ ನಾಳೆ ಬರುತ್ತೇವೆ ಎಂದು ಹೇಳಿ ಹೋಗುತ್ತಾರೆ. ಜನರಿಗೆ ಇದ್ದರಿಂದ ಸಮಸ್ಯೆ ಆಗುತ್ತಿದೆ.

ಪಂಚಾಯತ್‌ನಲ್ಲೂ ಸರಿಯಾಗಿ ಕರೆಂಟ್ ಇರುವುದಿಲ್ಲ. ಗ್ರಾಮಸ್ಥರು ಏನಾದರು ಕೆಲಸಕ್ಕಾಗಿ ಬಂದರೆ, ಎಲ್ಲಾ ಕೆಲಸಗಳು ಕಂಪ್ಯೂಟರ್‌ನಲ್ಲಿ ಆಗುವುದರಿಂದ ಸರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ, ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಕೆಲಸ ಮಾಡುವುದಿಲ್ಲ ಎಂದು ಹಿಡಿ ಶಾಪ ಹಾಕಿ ಹೋಗುತ್ತಾರೆ. ಮೇ ತಿಂಗಳಿನಲ್ಲಿಯೇ ಮರದ ಗೆಲ್ಲುಗಳನ್ನು ತೆಗೆಯುವಂತಹ ಕೆಲಸವನ್ನು ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

Suddi Udaya

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪದವಿಪೂರ್ವ ಕಾಲೇಜಿನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya

ಮಾ.10 ಮೂಲ್ಕಿಯಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ “ಬೆಳ್ಳಿ ಹಬ್ಬ ಸಂಭ್ರಮ”: ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಕಾರ್ಯಕ್ರಮದ ಯಶಸ್ವಿಗೆ ಪೂರ್ವಾಭಾವಿ ಸಭೆ

Suddi Udaya

ದಕ ಎಲ್ಲಾ ಶಾಲೆ, ಪಿಯು ಕಾಲೇಜ್ ಗಳಿಗೆ ರಜೆ

Suddi Udaya
error: Content is protected !!