30.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿಪ್ರಮುಖ ಸುದ್ದಿಸಮಸ್ಯೆ

ತೆಕ್ಕಾರು ಗ್ರಾಮದಲ್ಲಿ ರಾತ್ರಿ ವೇಳೆ ಕಣ್ಣಾ ಮುಚ್ಚಾಲೆ ಆಡುತ್ತಿರುವ ವಿದ್ಯುತ್

ತೆಕ್ಕಾರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ವಿದ್ಯುತ್ ತೆಕ್ಕಾರು ಗ್ರಾಮದ ಸರಳಿಕಟ್ಟೆ, ಬಾಜಾರು, ಕುಟ್ಟಿಕಾಳ, ಬಂಟ್ವಾಳ ತಾಲೂಕಿನ ಮಣಿನಾಲ್ಗೂರು, ನಡುಮೊಗರು, ಬೈಲಮೆರ್, ನೆಲ್ಲಿಪಲ್ಕೆ, ಗೋದಾಮ್ ಗುಡ್ಡೆ, ಪೊರ್ಕಲದವರೆಗೆ ಮಳೆ ಆರಂಭವಾದಗಿನಿಂದ ವಿದ್ಯುತ್ ಸಮಸ್ಯೆ ಪ್ರಾರಂಭವಾಗಿದೆ. ರಾತ್ರಿ ೧೦ ಗಂಟೆಗೆ ಹೋದಂತಹ ಕರೆಂಟ್ ಬರುವುದು ಬೆಳಗ್ಗೆ. ಸಂಜೆ ಏನಾದರೂ ಫ್ಯೂಸ್ ಹೋಗಿದೆ ಎಂದು ದೂರು ನೀಡಿದರೆ ಅದನ್ನು ಪವರ್‌ಮ್ಯಾನ್‌ಗಳು ಮರುದಿನ ಬಂದು ಹಾಕುತ್ತಾರೆ.
ತೆಕ್ಕಾರು ಗ್ರಾಮದಲ್ಲಿ ಇಬ್ಬರು ಖಾಯಂ ಪವರ್‌ಮ್ಯಾನ್‌ಗಳು ಇದ್ದಾರೆ. ಎಲ್ಲಿಯಾದರು ವಿದ್ಯುತ್ ಕಂಬ, ತಂತಿ ಬಿದ್ದಿದೆ ಎಂದು ದೂರು ನೀಡಿದರೆ ಇವತ್ತು ಜನ ಇಲ್ಲ ನಾಳೆ ಬರುತ್ತೇವೆ ಎಂದು ಹೇಳಿ ಹೋಗುತ್ತಾರೆ. ಜನರಿಗೆ ಇದ್ದರಿಂದ ಸಮಸ್ಯೆ ಆಗುತ್ತಿದೆ.

ಪಂಚಾಯತ್‌ನಲ್ಲೂ ಸರಿಯಾಗಿ ಕರೆಂಟ್ ಇರುವುದಿಲ್ಲ. ಗ್ರಾಮಸ್ಥರು ಏನಾದರು ಕೆಲಸಕ್ಕಾಗಿ ಬಂದರೆ, ಎಲ್ಲಾ ಕೆಲಸಗಳು ಕಂಪ್ಯೂಟರ್‌ನಲ್ಲಿ ಆಗುವುದರಿಂದ ಸರಿಯಾಗಿ ಕೆಲಸ ಮಾಡುವುದಕ್ಕೆ ಆಗುವುದಿಲ್ಲ, ಗ್ರಾಮಸ್ಥರು ಪಂಚಾಯತ್ ಸಿಬ್ಬಂದಿಗಳು ಕೆಲಸ ಮಾಡುವುದಿಲ್ಲ ಎಂದು ಹಿಡಿ ಶಾಪ ಹಾಕಿ ಹೋಗುತ್ತಾರೆ. ಮೇ ತಿಂಗಳಿನಲ್ಲಿಯೇ ಮರದ ಗೆಲ್ಲುಗಳನ್ನು ತೆಗೆಯುವಂತಹ ಕೆಲಸವನ್ನು ಮಾಡಬೇಕು ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ರಾಜ-ಮಹಾರಾಜ ಜೋಡುಕರೆ ಕಂಬಳ: ಮುಳಿಯ ಜ್ಯುವೆಲ್ಸ್ ನಿಂದ ಆಭರಣಗಳ ಪ್ರದರ್ಶನ: ಮುಳಿಯ ಪ್ರಾಪರ್ಟೀಸ್‌ ಬಗ್ಗೆ ಮಾಹಿತಿ ಕೇಂದ್ರ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya
error: Content is protected !!