ಬೆಳಾಲು ಪ್ರೌಢಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಬಸ್ಸು ಪಾಸು ವಿತರಣೆ

Suddi Udaya

ಬೆಳಾಲು: ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ, ಶಾಲಾ ವಿದ್ಯಾರ್ಥಿಗಳು ಬಸ್ ಪಾಸಿನ ಹಣದ ವೆಚ್ಚವನ್ನು ಪೂರ್ತಿಯಾಗಿ ಭರಿಸಿ, ವಿದ್ಯಾರ್ಥಿಗಳಿಗೆ ಉಚಿತ ಪಾಸಿನ ವಿತರಣೆಯನ್ನು ಮಾಡಲಾಯಿತು.


ಈ ಸಂಬಂಧವಾಗಿ ಜರಗಿದ ಸಭೆಯಲ್ಲಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಗಣೇಶ ಕನಿಕ್ಕಿಲ, ಕಾರ್ಯದರ್ಶಿಗಳಾದ ಮಹಮ್ಮದ್ ಶರೀಫ್ ರವರು ಪಾಸನ್ನು ವಿತರಿಸಿ ಶುಭಹಾರೈಸಿದರು. ಉಜಿರೆ, ಓಡಲ, ಮಾಚಾರು, ನಾರ್ಯ, ಕಾಡಂಡ, ದೊಂಪದಪಲ್ಕೆ, ಮಾಯ ಈ ಭಾಗದಿಂದ ಬಸ್ಸಿನಲ್ಲಿ ಬರುವ 23 ಮಂದಿ ವಿದ್ಯಾರ್ಥಿಗಳು ಉಚಿತ ಪಾಸನ್ನು ಸ್ವೀಕರಿಸಿದರು.

ಮುಖ್ಯೋಪಾಧ್ಯಾಯರಾದ ರಾಮಕೃಷ್ಣ ಭಟ್ ಸ್ವಾಗತಿಸಿ ವಂದಿಸಿದರು. ಶಾರೀರಿಕ ಶಿಕ್ಷಣ ಶಿಕ್ಷಕರಾದ ಕೃಷ್ಣಾನಂದರವರು ಕಾರ್ಯಕ್ರಮ ಸಂಯೋಜಿಸಿದರು.

Leave a Comment

error: Content is protected !!