ಮುಂಡಾಜೆ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya

ಮುಂಡಾಜೆಯ ಕಾರ್ಗಿಲ್ ವನದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಜು.25ರಂದು ಆಚರಿಸಲಾಯಿತು.

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಕ್ರೀಡಾ ಹಾಗೂ ಎನ್ ಸಿ ಸಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಆಗಮಿಸಿದ್ದರು.

ಈ ಸಂದರ್ಭದಲ್ಲಿ ಕಾರ್ಗಿಲ್ ಯುದ್ಧದಲ್ಲಿ ಮಡಿದ ಯೋಧರನ್ನು ಸ್ಮರಿಸಿ ಗಿಡಗಳನ್ನು ನೆಡಲಾಯಿತು ‌‌ ಕಾರ್ಗಿಲ್ ವನದ ರೂವಾರಿ ಸಚಿನ್ ಭಿಡೆ ಅನಿಸಿಕೆ ವ್ಯಕ್ತಪಡಿಸಿದರು.

ತಾಲೂಕು ಮಾಜಿ ಸೈನಿಕರ ಸಂಘದ ಸದಸ್ಯರಾದ ಎಂ.ವಿ. ಭಟ್, ಗೋಪಾಲಕೃಷ್ಣ ಕಾಂಚೋಡು,ಶ್ರೀಕಾಂತ ಗೋರೆ,ಸೀತಾರಾಮ ಶೆಟ್ಟಿ,ಜಗನ್ನಾಥ ಶೆಟ್ಟಿ, ರಮಾನಾಥ ರೈ,ವಿಕ್ಟರ್ ಕ್ರಾಸ್ತಾ,ವಾಲ್ಟರ್ ಡಿಸೋಜಾ,ಜಗದೀಶ್ಚಂದ್ರ, ಸುರೇಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ಲತಾ ಜಿ.ಭಿಡೆ ಸ್ವಾಗತಿಸಿದರು. ಮಾಜಿ ಸೈನಿಕ ಜಗನ್ನಾಥ್ ಶೆಟ್ಟಿ ವಂದಿಸಿದರು.

Leave a Comment

error: Content is protected !!