ಶಿಶಿಲ: ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯೆಯರಿಂದ ನೇಜಿ ನಾಟಿ ಕಾರ್ಯಕ್ರಮ

Suddi Udaya

ಶಿಶಿಲ ಗ್ರಾಮ ಪಂಚಾಯತ್ ಮಟ್ಟದ ಸೃಷ್ಠಿ ಸಂಜೀವಿನಿ ಮಹಿಳಾ ಒಕ್ಕೂಟದ ಸ್ತ್ರೀ ಶಕ್ತಿ ಸ್ವಸಹಾಯ ಸಂಘದ ಸದಸ್ಯೆಯರು ಶಿಶಿಲ ಗ್ರಾಮದ ಎಳ್ಳುಮಜಲು ಎಂಬಲ್ಲಿ ಭತ್ತದ ಗದ್ದೆಯನ್ನು ಪಡೆದುಕೊಂಡು ಉಳುಮೆ ಮಾಡಿ ನೇಜಿ ನೆಡುವ ಕಾರ್ಯಕ್ರಮ ಜು.24 ರಂದು ನಡೆಯಿತು.


ಕಾರ್ಯಕ್ರಮದಲ್ಲಿ ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುದಿನ್ ಕುಮಾರ್ , ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ದಿನೇಶ್ , ಸಂಜೀವಿನಿ ಕಾರ್ಯಕ್ರಮದ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾಶ್ರೀ ,ಬೆಳ್ತಂಗಡಿ ತಾಲೂಕು ನೇತ್ರಾವತಿ ಸಂಜೀವಿನಿ ಒಕ್ಕೂಟದ ಕಾರ್ಯದರ್ಶಿ, ಶಿಶಿಲ ಸೃಷ್ಠಿ ಸಂಜೀವಿನಿ ಒಕ್ಕೂಟ ಅಧ್ಯಕ್ಷೆ ಶ್ರೀಮತಿ ಗಿರಿಜಾ ಕೆದಿಲಾಯ, ಎಮ್.ಬಿ.ಕೆ ಶ್ರೀಮತಿ ಶಾರದಾ, ಎಲ್.ಸಿ.ಆರ್‍.ಪಿ ಶಶಿ ಮತ್ತು ಶ್ರೀಮತಿ ಸಂಧ್ಯಾ , ಕೃಷಿ ಸಖಿ ಶ್ರೀಮತಿ ವಸಂತಿ, ಗಿರಿಜನ ಕಾಲೊನಿ ಅಂಗನವಾಡಿ ಕಾರ್ಯಕರ್ತೆ ಯಶೋದಾ ,ನಿವೃತ್ತ ಮುಖ್ಯ ಶಿಕ್ಷಕಿ ಸುಗುಣ ಕುಮಾರಿ ,ಆಶಾ ಕಾರ್ಯಕರ್ತೆ ಶ್ರೀಮತಿ ರೂಪಾ ,ಮತ್ಸ್ಯ ಶಿವದುರ್ಗಾ ಮಹಿಳಾ ಭಜನಾ ಸಂಘದ ಅಧ್ಯಕ್ಷರಾದ ವಿಶಾಲಾಕ್ಷಿ ಹಾಗೂ ಒಕ್ಕೂಟದ ಪದಾಧಿಕಾರಿಗಳು ಮತ್ತು ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

ಮಹಿಳೆಯರು ಗದ್ದೆ ನಾಟಿಯ ಸಂದರ್ಭದಲ್ಲಿ ಹಾಡುವ ಓಬೇಲೆ ಹಾಗೂ ಕಬಿತೆಗಳು ನಡೆಯಿತು.

Leave a Comment

error: Content is protected !!