September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಸಮಸ್ಯೆ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

ಬೆಳ್ತಂಗಡಿ: ಪುತ್ತೂರು-ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ ಮತ್ತು ಸಂಜೆ ನಿಯಮಿತ ಸಮಯದಲ್ಲಿ ಹೊರಡುವ ಬಸ್ ಗೆ ಜು.25 ರಂದು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಐದು ನಿಮಿಷಗಳ ಕಾಲ ಮುಂಚಿತವಾಗಿ ಬಂದಿದೆ ಅನ್ನುವ ಕಾರಣಕ್ಕೆ ಉಪ್ಪಿನಂಗಡಿ-ಬೆಳ್ತಂಗಡಿಗೆ ಹೊರಡುವ ಖಾಸಗಿ ಒಡೆತನದ ವರುಣ್ ಬಸ್ ಕೆ.ಎಸ್‌‌‌.ಆರ್.ಟಿ.ಸಿ ಬಸ್ ಗೆ ಅಡ್ಡಲಾಗಿ ನಿಂತ ಕಾರಣಕ್ಕಾಗಿ ದಿನನಿತ್ಯ ಪ್ರಯಾಣಿಸುವ ಸರಕಾರಿ ಬಸ್ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುವುದರ ಜೊತೆಗೆ ಅಸಂಬದ್ಧ ಪದ ಬಳಕೆ ಮಾಡಿರುವ ಬಗ್ಗೆ ವರುಣ್ ಬಸ್ ಕಂಡೆಕ್ಟರ್ ಹಾಗೂ ಏಜೆಂಟ್ ಗಳಿಗೆ ಸರಿಯಾದ ಉತ್ತರ ನೀಡಿರುವ ಬಗ್ಗೆ ಜುಲೈ 25 ರಂದು ವರದಿಯಾಗಿದೆ.

ಎಂದಿನಂತೆ ಪುತ್ತೂರು ಬಸ್ ನಿಲ್ದಾಣದಿಂದ 5.30 ಕ್ಕೆ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ 6.05 ನಿಮಿಷಕ್ಕೆ ತಲುಪಿತ್ತು, ಅದನ್ನೇ ಖ್ಯಾತೆ ತೆಗೆದು ಆ ಸಮಯದಲ್ಲಿ ಹೊರಡುವ ವರುಣ್ ಬಸ್ ಸಮಯಕ್ಕೆ ಮುಂಚಿತವಾಗಿ ಬಂದಿರುವುದರ ಕಾರಣವಾಗಿ ಸರಕಾರಿ ಬಸ್ ಗೆ ಅಡ್ಡಲಾಗಿ ನಿಂತು, ಮುಂದೆ ಚಲಾಯಿಸದಂತೆ ಇಲ್ಲ ಸಲ್ಲದ ಬೈಗುಳ ಮಾತನಾಡಿರುವುದನ್ನು ಕೇಳಿದ ಪ್ರಯಾಣಿಕರು ಅಡ್ಡಲಾಗಿರುವ ಬಸ್ ನ್ನು ತೆಗೆಯುವಂತೆ ಮನವಿ ಮಾಡಿದ್ದರು, ಅದಕ್ಕೂ ಜಗ್ಗದ ವರುಣ್ ಬಸ್ ‌ಕಂಡೆಕ್ಟರ್ ಮತ್ತು ಏಜೆಂಟ್ ಗಳು ಏಕಾಏಕಿ ಅಸಂಬದ್ಧ ಮಾತುಗಳ್ನಾಡಿರುವ ಬಗ್ಗೆ ಬಸ್ ಪ್ರಯಾಣಿಕರು ತಾವು ಹಿರಿಯರು ಈ ರೀತಿ ಮಾತನಾಡುವುದು ಸರಿಯಲ್ಲ, ನಿಮ್ಮ ಮಾತು ಇನ್ನೊಬ್ಬರಿಗೆ ಮಾರ್ಗದರ್ಶನವಾಗಬೇಕು ಎನ್ನುವ ಮಾತುಗಳನ್ನಾಡಿದ್ದಾರೆ.

ಪ್ರತಿನಿತ್ಯ ಧರ್ಮಸ್ಥಳ-ಪುತ್ತೂರು ಮಾರ್ಗವಾಗಿ ಸರಿಯಾದ ಸರಕಾರಿ ಬಸ್ ಓಡಾಡದಂತೆ ಖಾಸಗಿಯಾಗಿ ಓಡಾಡುವ ಬೆಳ್ತಂಗಡಿ-ಉಪ್ಪಿನಂಗಡಿ ಬಸ್ ನವರೇ ಸಮಸ್ಯೆ ಮಾಡಿರಬಹುದು ಎಂದು ಜನ ಅಂದುಕೊಳ್ಳುತ್ತಿದ್ದಾರೆ.

Related posts

ನಿವೃತ್ತ ಯೋಧ ಡಾ.ಕೆ.ಎಸ್ ಗೋಪಾಲಕೃಷ್ಣ ಕಾಂಚೋಡು ಅವರಿಗೆ ‘ಕರಾವಳಿ ರತ್ನ’ ಪ್ರಶಸ್ತಿ

Suddi Udaya

ಗರ್ಡಾಡಿಯ ವಿಶಿಷ್ಠ ಸಾಧಕಿ ಸಬಿತಾ ಮೋನಿಸ್ ರವರಿಗೆ ” ವಿಜಯ ಸ್ಮೃತಿ” ಪುರಸ್ಕಾರ ನೀಡಿ ಸನ್ಮಾನ

Suddi Udaya

ಉಜಿರೆ ನಿನ್ನಿಕಲ್ಲು 33/11 ಕೆ.ವಿ ವಿದ್ಯುತ್ ಉಪಕೇಂದ್ರದ ಕಾಮಗಾರಿ ಶೀಘ್ರ ಆರಂಭ: ನಿನ್ನಿಕಲ್ಲಿನಲ್ಲಿ 0.96 ಎಕ್ರೆ ಜಾಗ ಮಂಜೂರು: ರೂ. 46.66 ಲಕ್ಷ ಸ್ಥಳ ಮೌಲ್ಯ ಪಾವತಿಗೆ ಸೂಚನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವ: ಸವ೯ಧಮ೯ ಸಮ್ಮೇಳನದ 93ನೇ ಅಧಿವೇಶನ ಉದ್ಘಾಟನೆ

Suddi Udaya

ಕಾಯರ್ತ್ತಡ್ಕ ನೇತಾಜಿ ಆಟೋ ಪ್ರೆಂಡ್ಸ್ ಸಂಘದ ವತಿಯಿಂದ ಚಿಕಿತ್ಸಾ ನೆರವು

Suddi Udaya

ಧರ್ಮಸ್ಥಳದಲ್ಲಿ ನವಜೀವನ ಸದಸ್ಯರ ಶತದಿನೋತ್ಸವ: ಕಾರ್ಯಕ್ರಮದ ಅಂಗವಾಗಿ ವ್ಯಸನಮುಕ್ತ ಸಾಧಕರ ಸಮಾವೇಶ

Suddi Udaya
error: Content is protected !!