July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಸಮಸ್ಯೆ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

ಬೆಳ್ತಂಗಡಿ: ಪುತ್ತೂರು-ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ ಮತ್ತು ಸಂಜೆ ನಿಯಮಿತ ಸಮಯದಲ್ಲಿ ಹೊರಡುವ ಬಸ್ ಗೆ ಜು.25 ರಂದು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಐದು ನಿಮಿಷಗಳ ಕಾಲ ಮುಂಚಿತವಾಗಿ ಬಂದಿದೆ ಅನ್ನುವ ಕಾರಣಕ್ಕೆ ಉಪ್ಪಿನಂಗಡಿ-ಬೆಳ್ತಂಗಡಿಗೆ ಹೊರಡುವ ಖಾಸಗಿ ಒಡೆತನದ ವರುಣ್ ಬಸ್ ಕೆ.ಎಸ್‌‌‌.ಆರ್.ಟಿ.ಸಿ ಬಸ್ ಗೆ ಅಡ್ಡಲಾಗಿ ನಿಂತ ಕಾರಣಕ್ಕಾಗಿ ದಿನನಿತ್ಯ ಪ್ರಯಾಣಿಸುವ ಸರಕಾರಿ ಬಸ್ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುವುದರ ಜೊತೆಗೆ ಅಸಂಬದ್ಧ ಪದ ಬಳಕೆ ಮಾಡಿರುವ ಬಗ್ಗೆ ವರುಣ್ ಬಸ್ ಕಂಡೆಕ್ಟರ್ ಹಾಗೂ ಏಜೆಂಟ್ ಗಳಿಗೆ ಸರಿಯಾದ ಉತ್ತರ ನೀಡಿರುವ ಬಗ್ಗೆ ಜುಲೈ 25 ರಂದು ವರದಿಯಾಗಿದೆ.

ಎಂದಿನಂತೆ ಪುತ್ತೂರು ಬಸ್ ನಿಲ್ದಾಣದಿಂದ 5.30 ಕ್ಕೆ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ 6.05 ನಿಮಿಷಕ್ಕೆ ತಲುಪಿತ್ತು, ಅದನ್ನೇ ಖ್ಯಾತೆ ತೆಗೆದು ಆ ಸಮಯದಲ್ಲಿ ಹೊರಡುವ ವರುಣ್ ಬಸ್ ಸಮಯಕ್ಕೆ ಮುಂಚಿತವಾಗಿ ಬಂದಿರುವುದರ ಕಾರಣವಾಗಿ ಸರಕಾರಿ ಬಸ್ ಗೆ ಅಡ್ಡಲಾಗಿ ನಿಂತು, ಮುಂದೆ ಚಲಾಯಿಸದಂತೆ ಇಲ್ಲ ಸಲ್ಲದ ಬೈಗುಳ ಮಾತನಾಡಿರುವುದನ್ನು ಕೇಳಿದ ಪ್ರಯಾಣಿಕರು ಅಡ್ಡಲಾಗಿರುವ ಬಸ್ ನ್ನು ತೆಗೆಯುವಂತೆ ಮನವಿ ಮಾಡಿದ್ದರು, ಅದಕ್ಕೂ ಜಗ್ಗದ ವರುಣ್ ಬಸ್ ‌ಕಂಡೆಕ್ಟರ್ ಮತ್ತು ಏಜೆಂಟ್ ಗಳು ಏಕಾಏಕಿ ಅಸಂಬದ್ಧ ಮಾತುಗಳ್ನಾಡಿರುವ ಬಗ್ಗೆ ಬಸ್ ಪ್ರಯಾಣಿಕರು ತಾವು ಹಿರಿಯರು ಈ ರೀತಿ ಮಾತನಾಡುವುದು ಸರಿಯಲ್ಲ, ನಿಮ್ಮ ಮಾತು ಇನ್ನೊಬ್ಬರಿಗೆ ಮಾರ್ಗದರ್ಶನವಾಗಬೇಕು ಎನ್ನುವ ಮಾತುಗಳನ್ನಾಡಿದ್ದಾರೆ.

ಪ್ರತಿನಿತ್ಯ ಧರ್ಮಸ್ಥಳ-ಪುತ್ತೂರು ಮಾರ್ಗವಾಗಿ ಸರಿಯಾದ ಸರಕಾರಿ ಬಸ್ ಓಡಾಡದಂತೆ ಖಾಸಗಿಯಾಗಿ ಓಡಾಡುವ ಬೆಳ್ತಂಗಡಿ-ಉಪ್ಪಿನಂಗಡಿ ಬಸ್ ನವರೇ ಸಮಸ್ಯೆ ಮಾಡಿರಬಹುದು ಎಂದು ಜನ ಅಂದುಕೊಳ್ಳುತ್ತಿದ್ದಾರೆ.

Related posts

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಸರಕಾರಿ ಐ.ಟಿ.ಐ 2024ನೇ ಸಾಲಿನ ಪ್ರವೇಶಕ್ಕೆ ಅರ್ಜಿ ಆಹ್ವಾನ

Suddi Udaya

ಕಟೀಲ್ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನಕ್ಕೆ ಗರ್ಡಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ಸುಮಾರು 30 ಭಕ್ತರಿಂದ ಪಾದಯಾತ್ರೆ

Suddi Udaya

ನಾವರ: ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾ‌ರ್ ಭೇಟಿ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ: 8ನೇ ಗುರುತು ಮಾಡಿದ ಜಾಗದಲ್ಲಿ ಸಿಗದ ಕಳೇಬರ

Suddi Udaya

ಧರ್ಮಸ್ಥಳ : ಅಸಹಜ ಸಾವು ಪ್ರಕರಣ : ಮಾಸಾಂತ್ಯಕ್ಕೆ ಎಸ್‌ಐಟಿ ಯಿಂದ ವರದಿ ಸಲ್ಲಿಕೆ

Suddi Udaya
error: Content is protected !!