July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ರವರ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ವಿತರಣೆ

ಉಜಿರೆ: ಎಸ್.ಡಿ.ಯಂ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ವಿದ್ಯಾರ್ಥಿನಿ ಹಾಗೂ ಕಬಡ್ಡಿಯಲ್ಲಿ ಗಮನೀಯ ಸಾಧನೆಯನ್ನು ಮಾಡಿದ್ದ ಕು. ಚಿನ್ಮಯಿ ತಮ್ಮ ಪ್ರಾಯೋಜಕತ್ವದಲ್ಲಿ ಕ್ರೀಡಾ ಕಿಟ್ ಗಳನ್ನು ಕಾಲೇಜಿನ ಕ್ರೀಡಾ ವಿಭಾಗದಲ್ಲಿ ಸಾಧನೆಗೈದಿರುವ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ವಿತರಿಸಿದರು.


ಈ ಸಂದರ್ಭದಲ್ಲಿ ಕಾಲೇಜ್ ನೀಡಿರುವ ಪ್ರೋತ್ಸಾಹ ಮತ್ತು ದೈಹಿಕ ಶಿಕ್ಷಣ ನಿರ್ದೇಶಕರ ನಿರಂತರ ತರಬೇತಿಯನ್ನು ಕು. ಚಿನ್ಮಯಿ ನೆನಪಿಸಿಕೊಂಡರು.


ಕಾಲೇಜಿನ ಪ್ರಾಂಶುಪಾಲರಾದ ಡಾ. ಅಶೋಕ್ ಕುಮಾರ್, ಚಿನ್ಮಯಿಯವರ ಈ ಕೊಡುಗೆಗೆ ಮೆಚ್ಚುಗೆ ವ್ಯಕ್ತಪಡಿಸಿ ಈ ಕಾರ್ಯ ಇತರರಿಗೆ ಮಾದರಿಯಾಗಲಿ ಎಂದು ಶುಭಹಾರೈಸಿದರು.


ವೇದಿಕೆಯಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್ ಮತ್ತು ನಿತಿನ್ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ಚಿರಂತ್ ಸ್ವಾಗತಿಸಿ, ಪ್ರದೀಪ್ ವಂದಿಸಿದರು. ಪುನೀತ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಸುಲ್ಕೇರಿ ಬ್ರಹ್ಮ ಶ್ರೀ ನಾರಾಯಣ ಗುರು ಸೇವಾ ಸಂಘದ ಗುರುಪೂಜೆಯ ಪೂರ್ವಭಾವಿ ಸಭೆ

Suddi Udaya

ಎ.30: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಾಮಾಜಿಕ ಅರಣ್ಯೀಕರಣ ಗಿಡ ನಾಟಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಸರಕಾರಿ ಪ.ಪೂ. ಕಾಲೇಜಿಗೆ ಶೇ. 93.33 ಫಲಿತಾಂಶ

Suddi Udaya

ಎಕ್ಸೆಲ್ ನಲ್ಲಿ ಎನ್ ಡಿ ಎ ತರಗತಿಗಳ ಓರಿಯಂಟೇಶನ್

Suddi Udaya

ಶಿಬಾಜೆ: ನಾರಾಯಣ ಗುರು ಮಂದಿರಕ್ಕೆ ರಕ್ಷಿತ್ ಶಿವರಾಂ ರವರಿಂದ ಮರದ ಬಾಗಿಲು ಹಸ್ತಾಂತರ

Suddi Udaya
error: Content is protected !!