25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ : ಜಿ.ಎ.ಎಸ್. ಕಂಬದಲ್ಲಿ ಢಮರ್ ಶಬ್ದ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಿಯ,ನ್ಯಾಯತರ್ಪು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣುಮುಚ್ಚಾಲೆ ಆಗುತ್ತಿದೆ. ಜಿ.ಎ.ಎಸ್.ಕಂಬದಲ್ಲಿ ಢಮರ್ ಎಂಬ ದೊಡ್ಡ ಗಾತ್ರದ ಶಬ್ದ. ಜು.26 ರಂದು ಆಗಾಗ ಕೇಳಿಸುವಾಗ ಸಾರ್ವಜನಿಕರನ್ನೂ ಬೆಚ್ಚಿ ಬೀಳಿಸುಂತಿದೆ. ಮತ್ತು ವಿದ್ಯುತ್ ತಂತಿಗಳು ತುಂಡಾಗಿ ಬೀಳುವ ಸಾಧ್ಯತೆ ಇದೆ ಭಾವಿಸಲಾಗುತ್ತದೆ.


ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ತಲೆದೋರುವುದು ಸರ್ವೇಸಾಮಾನ್ಯವಾಗಿದೆ. ಅದರೆ ಇಲ್ಲಿಯ ಸಮಸ್ಯೆಗಳು ಹಲವಾರು ಇದೆ. ಕಳೆದ ವರ್ಷದಿಂದ ಈ ತನಕ ಕೆಲವೊಂದು ಕಡೆಗಳಲ್ಲಿ ವಿದ್ಯುತ್ ಕಂಬಕ್ಕೆ ಮತ್ತು ತಂತಿಗಳಿಗೆ ತಾಗಿಕೊಂಡಿರುವ ಮರದ ಕೊಂಬೆಗಳನ್ನು ತರೆವುಗೊಳಿಸದೆ ಮತ್ತು ಸಂಬಂಧಪಟ್ಟ ಸಿಬ್ಬಂದಿ ಹಾಗೂ ಅಧಿಕಾರಿಗಳ ಬೇಜಾವಬ್ದಾರಿ ಎದ್ದು ಕಾಣುತ್ತದೆ ಎಂದು ಸಾರ್ವಜನಿಕರ ಅಭಿಪ್ರಾಯವಾಗಿದೆ.


ಗೇರುಕಟ್ಟೆ ಮಂಜಲಡ್ಕ ಕ್ರಾಸ್ ರಸ್ತೆಯ ಪಕ್ಕದಲ್ಲಿ ಅಂಗಾರಬೆಟ್ಟು ಕಡೆಗೆ ಹೋಗುವ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬದ ತಂತಿಗಳಿಗೆ ಅಳವಡಿಸಿದ ಗ್ಲಾಸು ಮುರಿದು 3-4 ತಿಂಗಳ ಹಿಂದೆ ಆಗಿದೆ. ಕಂಬದಿಂದ ತಂತಿ ಬೇರ್ಪಟ್ಟ ಸುಮಾರು 6 ರಿಂದ 8 ಅಡಿ ದೂರ ಸರಿದು ಸದ್ಯ ಪಕ್ಕದಲ್ಲಿರುವ ಮರದ ಕೊಂಬೆಗಳ ಅಧಾರದಲ್ಲಿ ನಿಂತಿರುತ್ತದೆ. ಹಾಗೂ ಅದರಲ್ಲಿ ವಿದ್ಯುತ್ ಸಂಚಾರವಿರುವುದನ್ನು ಗಮನಿಸಿದಾಗ ಮೈ ಝಮೇನಿಸುತ್ತದೆ.ಶಾಲಾ ಮಕ್ಕಳು, ಕೃಷಿಕರು ಇದೇ ರಸ್ತೆಯಲ್ಲಿ ಓಡಾಡುವುದು ಅನಿವಾರ್ಯವಾಗಿದೆ.
ಈ ಬಗ್ಗೆ ಸ್ಥಳೀಯರು ಸಿಬ್ಬಂದಿಗಳಿಗೆ ತಿಳಿಸಿದರು ಕ್ಯಾರೆ ಮಾಡುವುದಿಲ್ಲ.ಜೀವ ಬಲಿಪಡೆದ ನಂತರದಲ್ಲಿ ಸರಿಪಡಿಸುವ ಮನೋಭಾವನೆ ಇರಬಹುದಾ..?


ಪರಪ್ಪು- ಕೊಯ್ಯೂರು ಕ್ರಾಸ್ ಬಟ್ಟೆಮಾರು ರಸ್ತೆಯ ಪಕ್ಕದಲ್ಲಿ ಟ್ರಾನ್ಸ್ ಫಾರ್ಮ್ ಪೆಟ್ಟಿಗೆ ಯಿಂದ ಹಾದು ಹೋಗುವ ಎಲ್ಲಾ ತಂತಿಗಳು ಪಕ್ಕದ ಮರ,ಬಳ್ಳಿಗಳ ಆಶ್ರಯ ಪಡೆದು ಕೊಂಡಿದೆ.ಅದರಲ್ಲಿ ಆಗಾಗ ಬೆಂಕಿ ಕಾಣಿಸಿಕೊಂಡಾಗ ಭಯವಾಗುತ್ತದೆ ಎಂದು ಪಕ್ಕದ ಮನೆಯವರು ಹಾಗೂ ಸಾರ್ವಜನಿಕ ಹೇಳುತ್ತಾರೆ..ಕೆಲವೇ ತಿಂಗಳ ಹಿಂದೆ ಬೈಹುಲ್ಲಿನ ವಾಹನಕ್ಕೆ ಬೆಂಕಿ ತಗುಲಿದ ನೆನೆಪು ಇನ್ನೂ ಮಾಸಿಲ್ಲ. ಮೆಸ್ಕಾಂ ಇಲಾಖೆಯವರು ಸಾರ್ವಜನಿಕರೊಂದಿಗೆ ಚೆಲ್ಲಾಟವಾಡುವುದನ್ನು ಬಿಟ್ಟು ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸುತ್ತಾರೆ.ತಪ್ಪಿದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ,ಶಾಸಕರ ಹಾಗೂ ಸಂಸದರ ಗಮನಕ್ಕೆ ತರುವುದು ಅನಿವಾರ್ಯವಾಗಿದೆ ಎಚ್ಚರಿಸಿದ್ದಾರೆ.


ಈ ಹಿಂದೆ ಪತ್ರಿಕೆ, ವೆಬ್ ಸೈಟ್ ಗಳಲ್ಲಿ ವರದಿ ಪ್ರಕಟವಾದ ನಂತರದಲ್ಲಿ ಕಾಟಾಚಾರಕ್ಕೆ ಸ್ವಲ್ಪಮಟ್ಟಿಗೆ ಕೃಷಿಕರ ಮತ್ತು ಸಾರ್ವಜನಿಕರ ಸಹಾಯದಿಂದ ಮರದ ಕೊಂಬೆ ತೆರವು ಕೆಲಸ ಆಗಿದೆ.
ವರದಿ: ಕೆ.ಎನ್ ಗೌಡ

Related posts

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿಯ ನಾಮನಿರ್ದೇಶಿತ ಸದಸ್ಯರಾಗಿ ಮಿತ್ತಬಾಗಿಲು ಗ್ರಾ.ಪಂ. ಅಧ್ಯಕ್ಷ ವಿನಯಚಂದ್ರ ಗೌಡ ಆಯ್ಕೆ

Suddi Udaya

ಬೆಳ್ತಂಗಡಿ :ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಪ್ರಯಾಣ ಬೆಳೆಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆ ಮತ್ತು ರವಿಶಂಕರ್ ಗುರೂಜಿ

Suddi Udaya

ನಾವೂರು: ಜನತಾ ಕಾಲನಿಯಲ್ಲಿ ಗುಡ್ಡೆ ಕುಸಿತ ಹಾನಿ

Suddi Udaya

ಜೆಸಿಐ ಮಡಂತ್ಯಾರು ಆತಿಥ್ಯದಲ್ಲಿ ಅದ್ದೂರಿ ವ್ಯವಹಾರ ಸಮ್ಮೇಳನ 2025 – ಮೃದಂಗ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ನೇತೃತ್ವದಲ್ಲಿ ಪ್ರತಿಭಾ ಸಂಗಮ ಕಾರ್ಯಕ್ರಮ

Suddi Udaya
error: Content is protected !!