ಕೊಕ್ಕಡ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲಕ ಶ್ರೀಕಾಂತ್ ರಿಂದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಸ್ತೆಯಲ್ಲಿ ಇದ್ದ ಗಿಡಗಂಟಿ ಹಾಗೂ ಪೊದೆಗಳ ದುರಸ್ತಿ ಕಾರ್ಯ

Suddi Udaya

ಕೊಕ್ಕಡ ಗ್ರಾಮದ ಉಪ್ಪಾರಪಳಿಕೆ ಯಿಂದ ಗೋಳಿತೊಟ್ಟು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ಜಿಲ್ಲಾ ಪಂಚಾಯತ್ ರಸ್ತೆಯಲ್ಲಿ ಪುದ್ಯಂಗ ಬಸ್ಟ್ಯಾಂಡ್ ಬಳಿ ತಿರುವು ಮಾರ್ಗದಲ್ಲಿ ವಾಹನಗಳು ಸಂಚರಿಸಲು ಪೋದರುಗಳಿಂದ ಅನಾನುಕೂಲತೆ ಉಂಟಾಗಿತ್ತು.

ಇದನ್ನು ಗಮನಿಸಿದ ಕೊಕ್ಕಡ ಉದ್ಯಮಿ ಅರೆಕಾ ಪ್ಲೇಟ್ ಇಂಡಸ್ಟ್ರಿಸ್ ಮಾಲೀಕ ಶ್ರೀಕಾಂತ್ ಮತ್ತು ಹಿಟಾಚಿ ಮಾಲೀಕರಾದ ಅಶ್ವಥ್ ಬಾಂತಿಮರು ರವರು ಜೆಸಿಬಿ ಮೂಲಕ ದುರಸ್ತಿ ಗೊಳಿಸುವ ಮೂಲಕ ಸೇವೆ ಮಾಡಿದ್ದಾರೆ.

ಇವರ ಈ ಕಾರ್ಯಕ್ಕೆ ಸ್ಥಳೀಯರು ಶ್ಲಾಘನೇ ವ್ಯಕ್ತಪಡಿಸಿದ್ದಾರೆ.

Leave a Comment

error: Content is protected !!