July 23, 2026
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ.
ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲರವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಮಹಿಳೆ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ.
ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

Related posts

ತೆಕ್ಕಾರು : ಪತ್ನಿಗೆ ಚೂರಿಯಿಂದ ಇರಿದು ಹತ್ಯೆ ಮಾಡಿದ ಪತಿ

Suddi Udaya

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ1.20 ಲಕ್ಷ ಮೌಲ್ಯದ ಬುಲೆಟ್ ಬೈಕ್ಕಳವು

Suddi Udaya

ಉಜಿರೆಯಲ್ಲಿ ಖಾಸಗಿ ಸುದ್ದಿವಾಹಿನಿ ವರದಿಗಾರ ಮೇಲೆ ಹಲ್ಲೆ ಪ್ರಕರಣ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ಹಲವು ಮಂದಿಯ ಮೇಲೆ ಪ್ರಕರಣ ದಾಖಲು

Suddi Udaya

ಧರ್ಮಸ್ಥಳ ಪ್ರಕರಣ -ದೂರುದಾರ ಚಿನ್ನಯ್ಯ ನೀಡಿದ ದೂರು ಸುಳ್ಳು : ಮಾನ್ಯ ಹೈಕೋರ್ಟ್ ನಲ್ಲಿ ವಿಶೇಷ ಸರ್ಕಾರಿ ಅಭಿಯೋಜಕರ ವಾದ

Suddi Udaya

ಉಜಿರೆ: ಅಂಗಡಿ-ಹೋಟೆಲ್ ಗೆ ನುಗ್ಗಿದ ಕಳ್ಳರು

Suddi Udaya

ವೈದ್ಯಕೀಯ ದಾಖಲೆ ವಿಷಯದಲ್ಲಿ ತಂದೆ-ಮಗನ ನಡುವೆ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆ ಗೈದ ತಂದೆ

Suddi Udaya
error: Content is protected !!