26.1 C
ಪುತ್ತೂರು, ಬೆಳ್ತಂಗಡಿ
September 11, 2026
ಸಂಘ-ಸಂಸ್ಥೆಗಳು

ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಬೆಳ್ತಂಗಡಿ:ಮಹಿಳಾ ವೃಂದ ಬೆಳ್ತಂಗಡಿ ಮತ್ತು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಡೆಂಗ್ಯೂ ಜ್ವರದ ಮಾಹಿತಿ ಮತ್ತು ಜಾಗೃತಿ ಹಾಗೂ ಕಾರ್ಗಿಲ್ ವಿಜಯ ದಿವಸ್ ಆಚರಣೆಯು ಸರಕಾರಿ ಪ್ರೌಢ ಶಾಲೆ ಬೆಳ್ತಂಗಡಿಯಲ್ಲಿ ಜುಲೈ 26 ರಂದು ನಡೆಯುತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ವೃಂದದ ಅಧ್ಯಕ್ಷೆ ನೇತ್ರಾ ಅಶೋಕ್ ವಹಿಸಿದ್ದರು.

ಬೆಳ್ತಂಗಡಿ ಸಾರ್ವಜನಿಕ ಆರೋಗ್ಯ ಇಲಾಖೆಯ ಶ್ರೂಶ್ರಕ ಸುಂದರ್ ಮತ್ತು ಅಮ್ಮಿ ಸಿಸ್ಟರ್ ಡೆಂಗ್ಯೂ ಜ್ವರದ ಗುಣಲಕ್ಷಣಗಳು ಹಾಗೂ ತಡೆಗಟ್ಟುವ ಬಗ್ಗೆ ಜಾಗೃತಿ ವಿಧಾನ ಮತ್ತು ಮಾಹಿತಿ ನೀಡಿದರು.

ಕಾರ್ಗಿಲ್ ವಿಜಯ್ ದಿವಸದ ಅಂಗವಾಗಿ ಕಾರ್ಗಿಲ್ ಯುದ್ಧದ ಬಗ್ಗೆ ಮಾಹಿತಿಯನ್ನು ಮೇಜರ್ ಜನರಲ್ ಎಂ.ವಿ.ಭಟ್ ರವರು ನೀಡಿದರು.

ಮಹಿಳಾ ವೃಂದದ ವತಿಯಿಂದ ಮಕ್ಕಳಿಗೆ ಸಿಹಿತಿಂಡಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಹಿಳಾ ವೃಂದದ ಸದಸ್ಯರಾದ ವೀಣಾ ವಿ ಕುಮಾರ್,
ರಜಿನಿ,ಉಮಾ ರಾವ್, ರಶ್ಮಿ ಪಟವರ್ಧನ್,ಜೆಸಿರೆಟ್ ಕೋ ಆರ್ಡಿನೇಟರ್ ಶೃತಿ ರಂಜಿತ್ ಉಪಸ್ಥಿತರಿದ್ದರು.

ಶಿಕ್ಷಕಿ ಪೂರ್ಣಿಮಾ ಕಾರ್ಯಕ್ರಮ.ನಿರೂಪಿಸಿದರು.
ಪ್ರೀತಿ ಆರ್ ರಾವ್ ವಂದಿಸಿದರು.

Related posts

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಬಡ್ಡಡ್ಕ ಅಂಗನವಾಡಿ ಕೇಂದ್ರಕ್ಕೆ ಪೀಠೋಪಕರಣಗಳ ಕೊಡುಗೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯ ಗರಿ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya
error: Content is protected !!