25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

ಮುಂಡಾಜೆ ಪದವಿಪೂರ್ವ ಕಾಲೇಜು ಮುಂಡಾಜೆ ಇಲ್ಲಿನ ಮಹಿಳಾ ಕೋಶ ಹಾಗೂ ಡಿಜಿಟಲ್ ಸಾಕ್ಷರತಾ ಕ್ಲಬ್ ನ ವತಿಯಿಂದ ನಡೆದ ಡಿಜಿಟಲ್ ಸಾಕ್ಷರತಾ ಕಾರ್ಯಗಾರಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಉಪನ್ಯಾಸಕರಾದ ಕೃಷ್ಣ ಕಿರಣ್ ಕೆ. ಡಿಜಿಟಲೀಕರಣ ವ್ಯವಸ್ಥೆಯ ಬಳಕೆ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಜಾಲಿ ಒ.ಎ. ಇವರು ಮಾತನಾಡಿ ಕಂಪ್ಯೂಟರ್ ಸಾಕ್ಷರತಾ ವಿಷಯಗಳ ಬಗ್ಗೆ ಎಲ್ಲರೂ ತಿಳಿದಿರಬೇಕು, ಇದು ಇಂದಿನ ಆಧುನಿಕ ಯುಗಕ್ಕೆ ಅತ್ಯಗತ್ಯವಾಗಿದೆ ಎಂದು ತಿಳಿಸಿದರು.

ಮಹಿಳಾ ಕೋಶದ ಮುಖ್ಯಸ್ಥೆ ಹಾಗೂ ಇತಿಹಾಸ ಉಪನ್ಯಾಸಕಿಯಾದ ಶ್ರೀಮತಿ ಗೀತಾ ಇವರು ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿಯಾದ ಶ್ರೀಮತಿ ವಸಂತಿ ಇವರು ಎಲ್ಲರನ್ನೂ ಸ್ವಾಗತಿಸಿ, ವಿದ್ಯಾರ್ಥಿನಿ ಕುಮಾರಿ ಧನ್ಯ ಕಾರ್ಯಕ್ರಮ ನಿರೂಪಿಸಿ, ವಿದ್ಯಾರ್ಥಿನಿ ಕುಮಾರಿ ಛಾಯಾ ಧನ್ಯವಾದಗೈದರು.

Related posts

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿಗೆ ಸತತ ಮೂರನೇ ಬಾರಿಗೆ ಶೇ. 100 ಫಲಿತಾಂಶ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂ.ಮಾ. ಶಾಲೆಯಲ್ಲಿ ಡಾ ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಆಚರಣೆ

Suddi Udaya

ಕಂದಾಯ ಇಲಾಖೆಯ ಗ್ರಾಮ ಆಡಳಿತ ಅಧಿಕಾರಿಗಳ ಮೇಲೆ ದೌರ್ಜನ್ಯ ಮಾಡುತ್ತಿರುವ ಚಿಕ್ಕಮಗಳೂರು ಜಿಲ್ಲೆಯ ಮೀನಾ ನಾಗರಾಜ್ ಮತ್ತು ಅಪರ ಜಿಲ್ಲಾಧಿಕಾರಿ ಕನಕರೆಡ್ಡಿ ಇವರನ್ನು ಕೂಡಲೇ ವರ್ಗಾವಣೆ ಮಾಡಿ ನ್ಯಾಯ ಒದಗಿಸಿಕೊಡುವಂತೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ರವರಿಗೆ ಬೆಳ್ತಂಗಡಿ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿ ಸಂಘದಿಂದ ಮನವಿ

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಸುಜಿತಾ ವಿ. ಬಂಗೇರ ಮತ್ತು ಬಿನುತಾ ಬಂಗೇರ ಭೇಟಿ

Suddi Udaya
error: Content is protected !!