25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಂ. ಬಿ.ಎಡ್. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಮಹಾವಿದ್ಯಾಲಯ (ಬಿ.ಇಡಿ) ಉಜಿರೆ ಇಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಕಿರಣ್, ದ್ವಿತೀಯ ಬಿ.ಇಡಿ. ಪ್ರಶಿಕ್ಷಣಾರ್ಥಿ ಇವರು ಮಾತನಾಡುತ್ತಾ ಕಾರ್ಗಿಲ್ ಯುದ್ಧದ ಹಿನ್ನಲೆಯನ್ನು ತಿಳಿಸಿ, ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಕೆಚ್ಚೆದೆಯ ಶೌರ್ಯ, ಪರಾಕ್ರಮವು ಇಡೀ ವಿಶ್ವಕ್ಕೆ ತಿಳಿಯಲು ಮೂಲವಾದರೂ ಭಾರತವು ಅಪಾರ ಸಾವು-ನೋವುಗಳನ್ನು ಅನುಭವಿಸಬೇಕಾಯಿತು. ಯುದ್ಧದಿಂದಾಗಿ ಭಾರತೀಯ ಸೈನ್ಯವು ಅನುಭವಿಸಿದ ಕಷ್ಟಗಳು ಹಾಗೂ ಹೂಡಿದ ಯೋಜನೆಯನ್ನು ತಿಳಿಸಿದರು. ಇವರ ಹೋರಾಟ, ಯೋಜನೆಗಳ ಪ್ರತಿಫಲವೇ ಕಾರ್ಗಿಲ್ ಯುದ್ಧದ ಗೆಲುವಾಗಿ ನಾವು ನೋಡಬಹುದು. ಹೀಗಾಗಿ ಯುದ್ಧವೆನ್ನುವುದು ಪರಿಹಾರವಲ್ಲ, ಅದು ಇನ್ನೊಂದು ಯುದ್ಧಕ್ಕೆ ಮೂಲ. ಹೀಗಾಗಿ ಶಾಂತಿಯ ಮೂಲಕ ನಮ್ಮಲ್ಲಿನ ಭಿನ್ನಾಭಿಪ್ರಾಯವನ್ನು ಪರಿಹರಿಸಿಕೊಳ್ಳುವ ಮೂಲಕ ಭವಿಷ್ಯವನ್ನು ಉತ್ತಮಗೊಳಿಸಿಕೊಳ್ಳೋಣ ಎಂದರು.


ಕಾರ್ಗಿಲ್ ಯುದ್ಧವು ಭಾರತೀಯರ ಆತ್ಮಾಭಿಮಾನ, ರಾಜತಾಂತ್ರಿಕತೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತೀಯರ ಮತ್ತು ಭಾರತದ ಸೇನೆಯ ಪ್ರಾಬಲ್ಯವನ್ನು ಪ್ರದರ್ಶಿಸಲು ಸೂಕ್ತ ವೇದಿಕೆಯಾಗಿ ರೂಪುಗೊಂಡಿತ್ತು. ನಮ್ಮ ದೇಶವನ್ನು ಕಾಯುವ ಯೋಧರ ತ್ಯಾಗ, ಬಲಿದಾನಗಳು ಮತ್ತು ತುರ್ತು ಸನ್ನಿವೇಶಗಳಲ್ಲಿ ಆಪ್ತದೇಶಗಳ ಪ್ರಾಮಾಣಿಕ ಸಹಕಾರಗಳು ಈ ಗೆಲುವಿಗೆ ಪ್ರಮುಖ ಸಾಕ್ಷಿಯಾಗಿದೆ. ಭಾರತ ದೇಶವು ಯುದ್ಧ ಮಾಡುವುದಿಲ್ಲ ಆದರೆ ಭಾರತವನ್ನು ಕೆಣಕಲು ಬಂದಾಗ ಸುಮ್ಮನೆ ಬಿಡುವುದಿಲ್ಲಎಂಬ ಮಾತನ್ನು ಅಧ್ಯಕ್ಷೀಯ ನುಡಿಯಲ್ಲಿ ಪ್ರಶಿಕ್ಷಣಾರ್ಥಿ ಕೀರ್ತನ್ ಕುಮಾರ್ ತಿಳಿಸಿದರು.


ಭಾರತಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮತ್ತು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳು ದೇಶಭಕ್ತಿಗೀತೆಯನ್ನು ಹಾಡುವ ಮೂಲಕ ಕಾರ್ಯಕ್ರಮ ಪ್ರಾರಂಭಗೊಂಡಿತು.
ಈ ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ವಿದ್ಯಾಶ್ರೀ ಪಿ, ತಿರುಮಲೇಶ ರಾವ್ ಎನ್ ಕೆ, ಅನುಷಾ ಡಿ ಜೆ, ಚೈತ್ರ ಹಾಗೂ ಪ್ರಥಮ ಮತ್ತು ದ್ವಿತೀಯ ಬಿ.ಎಡ್. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ದ್ವಿತೀಯ ವರ್ಷದ ಪ್ರಶಿಕ್ಷಣಾರ್ಥಿಗಳಾದ ಆದ್ಯ ಅತಿಥಿಗಳನ್ನು ಪರಿಚಯಿಸಿ, ಶೋಭಿತಾ ಕಾರ್ಯಕ್ರಮವನ್ನು ನಿರೂಪಿಸಿದರು.

Related posts

ಪುತ್ತೂರಿನ ನೂತನ ಸಹಾಯಕ ಕಮಿಷನರ್ ಆಗಿ ಸ್ಟೆಲ್ಲಾ ವರ್ಗೀಸ್ ನಿಯುಕ್ತಿ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಪ್ರಾಕೃತಿಕ ವಿಕೋಪದಿಂದ ಮನೆ ಬಿರುಕುಗೊಂಡ ಕುಟುಂಬಕ್ಕೆ ಸಹಾಯಧನ ಹಸ್ತಾಂತರ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಬಳಂಜ ಬಿಲ್ಲವ ಸಂಘದಲ್ಲಿ, ಮಹಿಳಾ ಬಿಲ್ಲವ ವೇದಿಕೆಯ ನೇತೃತ್ವದಲ್ಲಿ ಆಟಿಡೊಂಜಿ‌ ದಿನ ಕಾರ್ಯಕ್ರಮ

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!