24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಸಮಸ್ಯೆ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

ಬೆಳ್ತಂಗಡಿ: ಪುತ್ತೂರು-ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ ಮತ್ತು ಸಂಜೆ ನಿಯಮಿತ ಸಮಯದಲ್ಲಿ ಹೊರಡುವ ಬಸ್ ಗೆ ಜು.25 ರಂದು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಐದು ನಿಮಿಷಗಳ ಕಾಲ ಮುಂಚಿತವಾಗಿ ಬಂದಿದೆ ಅನ್ನುವ ಕಾರಣಕ್ಕೆ ಉಪ್ಪಿನಂಗಡಿ-ಬೆಳ್ತಂಗಡಿಗೆ ಹೊರಡುವ ಖಾಸಗಿ ಒಡೆತನದ ವರುಣ್ ಬಸ್ ಕೆ.ಎಸ್‌‌‌.ಆರ್.ಟಿ.ಸಿ ಬಸ್ ಗೆ ಅಡ್ಡಲಾಗಿ ನಿಂತ ಕಾರಣಕ್ಕಾಗಿ ದಿನನಿತ್ಯ ಪ್ರಯಾಣಿಸುವ ಸರಕಾರಿ ಬಸ್ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುವುದರ ಜೊತೆಗೆ ಅಸಂಬದ್ಧ ಪದ ಬಳಕೆ ಮಾಡಿರುವ ಬಗ್ಗೆ ವರುಣ್ ಬಸ್ ಕಂಡೆಕ್ಟರ್ ಹಾಗೂ ಏಜೆಂಟ್ ಗಳಿಗೆ ಸರಿಯಾದ ಉತ್ತರ ನೀಡಿರುವ ಬಗ್ಗೆ ಜುಲೈ 25 ರಂದು ವರದಿಯಾಗಿದೆ.

ಎಂದಿನಂತೆ ಪುತ್ತೂರು ಬಸ್ ನಿಲ್ದಾಣದಿಂದ 5.30 ಕ್ಕೆ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ 6.05 ನಿಮಿಷಕ್ಕೆ ತಲುಪಿತ್ತು, ಅದನ್ನೇ ಖ್ಯಾತೆ ತೆಗೆದು ಆ ಸಮಯದಲ್ಲಿ ಹೊರಡುವ ವರುಣ್ ಬಸ್ ಸಮಯಕ್ಕೆ ಮುಂಚಿತವಾಗಿ ಬಂದಿರುವುದರ ಕಾರಣವಾಗಿ ಸರಕಾರಿ ಬಸ್ ಗೆ ಅಡ್ಡಲಾಗಿ ನಿಂತು, ಮುಂದೆ ಚಲಾಯಿಸದಂತೆ ಇಲ್ಲ ಸಲ್ಲದ ಬೈಗುಳ ಮಾತನಾಡಿರುವುದನ್ನು ಕೇಳಿದ ಪ್ರಯಾಣಿಕರು ಅಡ್ಡಲಾಗಿರುವ ಬಸ್ ನ್ನು ತೆಗೆಯುವಂತೆ ಮನವಿ ಮಾಡಿದ್ದರು, ಅದಕ್ಕೂ ಜಗ್ಗದ ವರುಣ್ ಬಸ್ ‌ಕಂಡೆಕ್ಟರ್ ಮತ್ತು ಏಜೆಂಟ್ ಗಳು ಏಕಾಏಕಿ ಅಸಂಬದ್ಧ ಮಾತುಗಳ್ನಾಡಿರುವ ಬಗ್ಗೆ ಬಸ್ ಪ್ರಯಾಣಿಕರು ತಾವು ಹಿರಿಯರು ಈ ರೀತಿ ಮಾತನಾಡುವುದು ಸರಿಯಲ್ಲ, ನಿಮ್ಮ ಮಾತು ಇನ್ನೊಬ್ಬರಿಗೆ ಮಾರ್ಗದರ್ಶನವಾಗಬೇಕು ಎನ್ನುವ ಮಾತುಗಳನ್ನಾಡಿದ್ದಾರೆ.

ಪ್ರತಿನಿತ್ಯ ಧರ್ಮಸ್ಥಳ-ಪುತ್ತೂರು ಮಾರ್ಗವಾಗಿ ಸರಿಯಾದ ಸರಕಾರಿ ಬಸ್ ಓಡಾಡದಂತೆ ಖಾಸಗಿಯಾಗಿ ಓಡಾಡುವ ಬೆಳ್ತಂಗಡಿ-ಉಪ್ಪಿನಂಗಡಿ ಬಸ್ ನವರೇ ಸಮಸ್ಯೆ ಮಾಡಿರಬಹುದು ಎಂದು ಜನ ಅಂದುಕೊಳ್ಳುತ್ತಿದ್ದಾರೆ.

Related posts

ಜ.28 ರಂದು ಉಜಿರೆಯ ಆರು ಕೇಂದ್ರದಲ್ಲಿ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗೆ ಲಿಖಿತ ಪರೀಕ್ಷೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ವಂದೇ ಮಾತರಂ’ ನನ್ನ ಸೇವೆ ದೇಶಕ್ಕಾಗಿ.. ನೇತ್ರಾವತಿ ನದಿ ಸ್ವಚ್ಛತಾ ಕಾರ್ಯಕ್ರಮ ಆರಂಭ : ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಸೇರಿದಂತೆ ಹಲವು ಸಂಘಟನೆಗಳ ಸಾಥ್

Suddi Udaya

ಲಾಯಿಲ: ಎಸ್. ಡಿ. ಪಿ. ಐ ವತಿಯಿಂದ ಹಳೆಪೇಟೆ ವ್ಯಾಪ್ತಿಯಲ್ಲಿ ನ್ಯಾಯ ಬೆಲೆ ಅಂಗಡಿಗಾಗಿ ಆಹಾರ ನಿರೀಕ್ಷಕರಿಗೆ ಮನವಿ

Suddi Udaya

ದೇವಾಂಗ ಸಮಾಜ ಮುಂಡಾಜೆ ಘಟಕದ ತ್ರೈಮಾಸಿಕ ಸಭೆ

Suddi Udaya

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ಆಶ್ರಯದಲ್ಲಿ ರಸ್ತೆ ಬದಿ ಹಣ್ಣಿನ ಗಿಡ ನಾಟಿ, ನೆಟ್ಟ ಗಿಡಗಳ ಪುನಶ್ಚೇತನ ಮತ್ತು ಇಂಗು ಗುಂಡಿ ರಚನಾ ಕಾರ್ಯಕ್ರಮ

Suddi Udaya
error: Content is protected !!