25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪುತ್ತೂರುಸಮಸ್ಯೆ

ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಅಡ್ಡಲಾಗಿ ನಿಂತ ಖಾಸಗಿ ವರುಣ್ ಬಸ್ ನ ಸಿಬ್ಬಂದಿಗೆ ತರಾಟೆ ತೆಗೆದುಕೊಂಡ ಕೆ.ಎಸ್.ಆರ್.ಟಿ.ಸಿ ಬಸ್ ಪ್ರಯಾಣಿಕರು

ಬೆಳ್ತಂಗಡಿ: ಪುತ್ತೂರು-ಧರ್ಮಸ್ಥಳ ಮಾರ್ಗವಾಗಿ ಬೆಳಿಗ್ಗೆ ಮತ್ತು ಸಂಜೆ ನಿಯಮಿತ ಸಮಯದಲ್ಲಿ ಹೊರಡುವ ಬಸ್ ಗೆ ಜು.25 ರಂದು ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಐದು ನಿಮಿಷಗಳ ಕಾಲ ಮುಂಚಿತವಾಗಿ ಬಂದಿದೆ ಅನ್ನುವ ಕಾರಣಕ್ಕೆ ಉಪ್ಪಿನಂಗಡಿ-ಬೆಳ್ತಂಗಡಿಗೆ ಹೊರಡುವ ಖಾಸಗಿ ಒಡೆತನದ ವರುಣ್ ಬಸ್ ಕೆ.ಎಸ್‌‌‌.ಆರ್.ಟಿ.ಸಿ ಬಸ್ ಗೆ ಅಡ್ಡಲಾಗಿ ನಿಂತ ಕಾರಣಕ್ಕಾಗಿ ದಿನನಿತ್ಯ ಪ್ರಯಾಣಿಸುವ ಸರಕಾರಿ ಬಸ್ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸುವುದರ ಜೊತೆಗೆ ಅಸಂಬದ್ಧ ಪದ ಬಳಕೆ ಮಾಡಿರುವ ಬಗ್ಗೆ ವರುಣ್ ಬಸ್ ಕಂಡೆಕ್ಟರ್ ಹಾಗೂ ಏಜೆಂಟ್ ಗಳಿಗೆ ಸರಿಯಾದ ಉತ್ತರ ನೀಡಿರುವ ಬಗ್ಗೆ ಜುಲೈ 25 ರಂದು ವರದಿಯಾಗಿದೆ.

ಎಂದಿನಂತೆ ಪುತ್ತೂರು ಬಸ್ ನಿಲ್ದಾಣದಿಂದ 5.30 ಕ್ಕೆ ಹೊರಟ ಕೆ.ಎಸ್.ಆರ್.ಟಿ.ಸಿ ಬಸ್ ಉಪ್ಪಿನಂಗಡಿ ಬಸ್ ನಿಲ್ದಾಣಕ್ಕೆ 6.05 ನಿಮಿಷಕ್ಕೆ ತಲುಪಿತ್ತು, ಅದನ್ನೇ ಖ್ಯಾತೆ ತೆಗೆದು ಆ ಸಮಯದಲ್ಲಿ ಹೊರಡುವ ವರುಣ್ ಬಸ್ ಸಮಯಕ್ಕೆ ಮುಂಚಿತವಾಗಿ ಬಂದಿರುವುದರ ಕಾರಣವಾಗಿ ಸರಕಾರಿ ಬಸ್ ಗೆ ಅಡ್ಡಲಾಗಿ ನಿಂತು, ಮುಂದೆ ಚಲಾಯಿಸದಂತೆ ಇಲ್ಲ ಸಲ್ಲದ ಬೈಗುಳ ಮಾತನಾಡಿರುವುದನ್ನು ಕೇಳಿದ ಪ್ರಯಾಣಿಕರು ಅಡ್ಡಲಾಗಿರುವ ಬಸ್ ನ್ನು ತೆಗೆಯುವಂತೆ ಮನವಿ ಮಾಡಿದ್ದರು, ಅದಕ್ಕೂ ಜಗ್ಗದ ವರುಣ್ ಬಸ್ ‌ಕಂಡೆಕ್ಟರ್ ಮತ್ತು ಏಜೆಂಟ್ ಗಳು ಏಕಾಏಕಿ ಅಸಂಬದ್ಧ ಮಾತುಗಳ್ನಾಡಿರುವ ಬಗ್ಗೆ ಬಸ್ ಪ್ರಯಾಣಿಕರು ತಾವು ಹಿರಿಯರು ಈ ರೀತಿ ಮಾತನಾಡುವುದು ಸರಿಯಲ್ಲ, ನಿಮ್ಮ ಮಾತು ಇನ್ನೊಬ್ಬರಿಗೆ ಮಾರ್ಗದರ್ಶನವಾಗಬೇಕು ಎನ್ನುವ ಮಾತುಗಳನ್ನಾಡಿದ್ದಾರೆ.

ಪ್ರತಿನಿತ್ಯ ಧರ್ಮಸ್ಥಳ-ಪುತ್ತೂರು ಮಾರ್ಗವಾಗಿ ಸರಿಯಾದ ಸರಕಾರಿ ಬಸ್ ಓಡಾಡದಂತೆ ಖಾಸಗಿಯಾಗಿ ಓಡಾಡುವ ಬೆಳ್ತಂಗಡಿ-ಉಪ್ಪಿನಂಗಡಿ ಬಸ್ ನವರೇ ಸಮಸ್ಯೆ ಮಾಡಿರಬಹುದು ಎಂದು ಜನ ಅಂದುಕೊಳ್ಳುತ್ತಿದ್ದಾರೆ.

Related posts

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ನಾರಾವಿ ಎನ್ ಎಸ್ ಎಸ್ ನಿಂದ ಸ್ವಚ್ಛತಾ ಜಾಥಾ

Suddi Udaya

ಉಜಿರೆ ಎಸ್ ಡಿ ಎಂ ಕಾಲೇಜಿನ ಸ್ಥಾಪಕ ಪ್ರಾಚಾರ್ಯ ಪ್ರೊ.ಎಸ್.ಪ್ರಭಾಕರ್ ಅವರಿಗೆ ನುಡಿನಮನ

Suddi Udaya

ಗೇರುಕಟ್ಟೆ ಆಟೋ-ಚಾಲಕರ ಸಂಘದ ವತಿಯಿಂದ ಸರ್ಪ ಸಂಸ್ಕಾರ ಪೂಜೆ

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya
error: Content is protected !!