29.6 C
ಪುತ್ತೂರು, ಬೆಳ್ತಂಗಡಿ
May 17, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ

ಬೆಳ್ತಂಗಡಿ: ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಸತೀಶ್ ಕೆ.ಕಾಶಿಪಟ್ಣ, ಉಪಾಧ್ಯಕ್ಷರಾಗಿ ದಿವಾಕರ ಭಂಡಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸಂಘದ ಆಡಳಿತ ಮಂಡಳಿಗೆ ಐದು ವರ್ಷಗಳ ಅವಧಿಗೆ ನಿರ್ದೇಶಕರ ಸ್ಥಾನದ ಚುನಾವಣೆ ಜು.14 ನಿಗದಿಯಾಗಿತ್ತು. ಸಾಮಾನ್ಯ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ, ಮಹಿಳಾ ಮೀಸಲು ಸ್ಥಾನಕ್ಕೆ ಮೀಸಲಿರಿಸಿದ ಸ್ಥಾನಗಳಿಂದ ಅಭ್ಯರ್ಥಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

ಸುಂದರ ಗೌಡ ಇಚ್ಚಿಲ ಉಜಿರೆ, ಮಹಾವೀರ ಜೈನ್ ನಾರಾವಿ, ದುಗ್ಗಪ್ಪ ಗೌಡ ತಣ್ಣೀರುಪಂಥ, ಸಂಜೀವ ಎಲ್ ನಾರಾವಿ, ಪ್ರಶಾಂತ್ ಬಿ. ಬಡಕೋಡಿ, ಪ್ರವೀಣ್ ಗಿಲ್ಬರ್ಟ್ ಪಿಂಟೋ ಕಾಶಿಪಟ್ಣ, ಸವಿತಾ ರಾಜೇಶ್ ಶೆಟ್ಟಿ ಪೆರಾಡಿ, ಗುಣವತಿ ಕುಕ್ಕೇಡಿ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾ ಉಸ್ತುವಾರಿಯಾಗಿ ಶೇಖರ್ ಕುಕ್ಕೇಡಿ , ಚುನಾವಣಾಧಿಕಾರಿಯಾಗಿ ಪ್ರತಿಮಾ ಭಾಗವಹಿಸಿದ್ದರು. ಸಂಘದ ಕಾರ್ಯದರ್ಶಿ ಆದರ್ಶ್ ಜೈನ್ ಸಹಕರಿಸಿದರು.

Related posts

ಕಣಿಯೂರು: ದೀಪಾ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ‌ ಬೆಳ್ತಂಗಡಿ ವಲಯದಿಂದ ಶ್ರೀವರಮಹಾಲಕ್ಷ್ಮೀ ಪೂಜೆ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಕುತ್ಯಾರು ಫ್ರೆಂಡ್ಸ್ ಬೆಳ್ತಂಗಡಿ ವತಿಯಿಂದ ಭಾರತೀಯ ಸೇನೆಗೆ ಶಕ್ತಿ ತುಂಬಲು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ 108 ಸೀಯಾಳಭಿಷೇಕ

Suddi Udaya

ಬೆಳ್ತಂಗಡಿ ಸಂತ ತೆರೇಸಾ ಪ್ರೌಢಶಾಲೆಯಲ್ಲಿ ತ್ರಿವಳಿ ಸಂಭ್ರಮ

Suddi Udaya

ಸುಲ್ಕೇರಿಮೊಗ್ರು ಸ. ಹಿ. ಪ್ರಾ. ಶಾಲಾ ಶೌಚಾಲಯ ಕುಸಿತ

Suddi Udaya
error: Content is protected !!