25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ. ಪಡೆದು ಕೊಕ್ಕಡದ ಮಹಿಳೆಗೆ ರೂ.1.50ಲಕ್ಷ. ವಂಚನೆ

ಕೊಕ್ಕಡ : ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ, ಓ.ಟಿ.ಪಿ ಪಡೆದು ಮಹಿಳೆಯೊವ೯ರಿಗೆ ಅಪರಿಚಿತ ವ್ಯಕ್ತಿ ರೂ.1.50 ಲಕ್ಷ ವಂಚಿಸಿದ ಪ್ರಕರಣ ಜು. 26ರಂದು ವರದಿಯಾಗಿದೆ.
ಕೊಕ್ಕಡ ಗಾಣಗಿರಿ ಸುಶೀಲ ರವರ ಬ್ಯಾಂಕ್ ಖಾತೆಯಿಂದ ರೂ. 1.50 ಲಕ್ಷವನ್ನು ಅಪರಿಚಿತ ವ್ಯಕ್ತಿ ಎಗರಿಸಿದ್ದಾನೆ.
ಸುಶೀಲರವರು ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿದ್ದು , ಎಟಿಎಂ ಗಾಗಿ ಅಪ್ಲಿಕೇಶನ್ ಹಾಕಿದ್ದು 3-4 ದಿನದ ಹಿಂದೆ ಎಟಿಎಂ ಕಾರ್ಡ್ ಬಂದಿತ್ತು. ಇಂದು ಬೆಳಗ್ಗೆ ಅಪರಿಚಿತ ವ್ಯಕ್ತಿಯೊಬ್ಬರು ಸುಶೀಲರವರಿಗೆ ಫೋನ್ ಮಾಡಿ ನಾನು ಬ್ಯಾಂಕ್ ಅಧಿಕಾರಿ ಎಂದು ಪರಿಚಯಿಸಿಕೊಂಡು ನಂಬಿಸಿ, ನಂತರ ಫೋನ್ ಮಾಡಿ ನಿಮಗೆ ಒಟಿಪಿ ಬಂದಿದೆ ನಂಬರ್ ಹೇಳಿ ಎಂದರು. ಅದರಂತೆ ಓಟಿಪಿ ನಂಬರ್ ಕೊಟ್ಟ ಸ್ವಲ್ಪ ಸಮಯದ ನಂತರ ಮಹಿಳೆ ಸುಶೀಲ ಅವರ ಖಾತೆಯಿಂದ ರೂ. 1.50 ಲಕ್ಷ ಡ್ರಾ ಆಗಿರುವುದು ಕಂಡು ಬಂದಿದೆ.
ಕೊಕ್ಕಡ ಕೆನರಾ ಬ್ಯಾಂಕ್ ನಲ್ಲಿ ಖಾತೆ ಹೊಂದಿರುವ ಹಲವಾರು ಗ್ರಾಹಕರು ಈ ರೀತಿಯ ಮೋಸಕ್ಕೆ ಬಲಿಯಾಗಿದ್ದಾರೆ.

Related posts

ಶಾಲಾ ವಿದ್ಯಾರ್ಥಿನಿಯನ್ನು. ನಿರ್ಜನ ಪ್ರದೇಶದಲ್ಲಿ ತಡೆದು ಹಲ್ಲೆ : ಜೀವಬೆದರಿಕೆ, ಬಟ್ಟೆ ಹರಿದು ಮಾನಕ್ಕೆ ಕುಂದು ಆರೋಪ ವಿದ್ಯಾರ್ಥಿನಿ ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ನಿವಾಸಿ, ವಿದ್ಯಾರ್ಥಿ ಆದಿಲ್ ಹುಸೈನ್ ಮೇಲೆ ಹಲ್ಲೆ

Suddi Udaya

ಬೆಳ್ತಂಗಡಿ : ಚೆಕ್ ಅಮಾನ್ಯ ಪ್ರಕರಣ ಆರೋಪಿ ಲಾಯಿಲ ನಿವಾಸಿ ಸಾಜಿಲ್ ಗೆ ಶಿಕ್ಷೆ

Suddi Udaya

ಉಜಿರೆ ಪೇಟೆಯಲ್ಲಿ ನಿಲ್ಲಿಸಿದ್ದ1.20 ಲಕ್ಷ ಮೌಲ್ಯದ ಬುಲೆಟ್ ಬೈಕ್ಕಳವು

Suddi Udaya

ಸಾಮಾಜಿಕ ಜಾಲತಾಣಗಳಲ್ಲಿ ಯುವಕನ ಬಗ್ಗೆ ಸುಳ್ಳು ಸಂದೇಶ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಹೊಸಂಗಡಿ ತೊರ್ಪೆ ಡ್ಯಾಂ ಬಳಿ ನದಿಯಲ್ಲಿ ಕಾರ್ಕಳ ಮಿಯಾರು ನಿವಾಸಿ ಯತೀಶ್ ಪೂಜಾರಿ ಶವ ಪತ್ತೆ : ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಕುಟುಂಬಸ್ಥರಿಂದ ಪೊಲೀಸರಿಗೆ ದೂರು

Suddi Udaya
error: Content is protected !!